Advertisement

Shiggaon; ಉಪಚುನಾವಣೆಯಲ್ಲಿ ಮುಸ್ಲಿಂ ಮುಖಂಡರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒತ್ತಾಯ

07:46 PM Jul 14, 2024 | Team Udayavani |

ಹುಬ್ಬಳ್ಳಿ: ಶಿಗ್ಗಾವಿ ಉಪಚುನಾವಣೆಯಲ್ಲಿ ತಮ್ಮ ಸಮುದಾಯದ ಮುಖಂಡರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವಂತೆ ವಿವಿಧ ಭಾಗದಿಂದ ಆಗಮಿಸಿದ ಅಂಜುಮನ್ ಇಸ್ಲಾಂ ಸಂಸ್ಥೆ ಮುಖಂಡರು ಹಾಗೂ ಮುಸ್ಲಿಂ ಸಮಾಜದ ಪ್ರಮುಖರು ಒತ್ತಾಯಿಸಿದರು.

Advertisement

ಈ ಕುರಿತು ಹುಬ್ಬಳ್ಳಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಯ ವಿವಿಧ ಭಾಗಗಳ ಅಂಜುಮನ್ ಇಸ್ಲಾಂ ಸಂಸ್ಥೆಯ ಪ್ರಮುಖರು ಇಲ್ಲಿನ ಖಾಸಗಿ ಹೊಟೇಲ್ ನಲ್ಲಿ ಸುದೀರ್ಘ ಸಭೆ ನಡೆಸಿ ಶಿಗ್ಗಾವಿ ಉಪ ಚುನಾವಣೆಯಲ್ಲಿ ಸಮಾಜಕ್ಕೆ ಟಿಕೆಟ್ ನೀಡಬೇಕು. ಈ ಕುರಿತು ಒಂದು ನಿಯೋಗ ತೆಗೆದುಕೊಂಡು ಪಕ್ಷದ ಹೈಕಮಾಂಡ್ ಗೆ ಭೇಟಿಯಾಗುವ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ. ಇತ್ತೀಚೆಗೆ ನಡೆದ ವಿಧಾನ ಪರಿಷತ್ತಿಗೆ ಆಯ್ಕೆ ವಿಚಾರದಲ್ಲಿ ಸಮಾಜವನ್ನು ಕಡೆಗಣಿಸಿದ್ದು, ಈ ಉಪ ಚುನಾವಣೆಗೆ ಮುಸ್ಲಿಂ ಸಮಾಜವನ್ನು ಪರಿಗಣಿಡುವಂತೆ ಒತ್ತಾಯ ಸಮಾಜದ ಮುಖಂಡರಿಂದ ವ್ಯಕ್ತವಾಗಿದೆ.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಹಾಗೂ ಹುಬ್ಬಳ್ಳಿ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಎ.ಎಂ.ಹಿಂಡಸಗೇರಿ, ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸಮಾಜದಲ್ಲಿ ಯಾರೇ ಟಿಕೆಟ್ ಕೊಟ್ಟರೂ ಅವರ ಪರವಾಗಿ ನಾವೆಲ್ಲರು ಸೇರಿ ಒಟ್ಟಾಗಿ ಕೆಲಸ ಮಾಡುತ್ತೇವೆ. ಇಂತಹವರಿಗೆ ಟಿಕೆಟ್ ಕೊಡಬೇಕು ಎಂಬುವುದು ನಮ್ಮ ಬೇಡಿಕೆಯಲ್ಲ. ಒಟ್ಟಾರೆ ನಮ್ಮ ಸಮಾಜಕ್ಕೆ ಯಾರಿಗೆ ಕೊಟ್ಟರೂ ಪರವಾಗಿಲ್ಲ‌. ಕಳೆದ ಚುನಾವಣೆಯಲ್ಲಿ ನಮ್ಮ ಸಮಾಜಕ್ಕೆ ಟಿಕೆಟ್ ನೀಡಲಾಗಿತ್ತು. ಕಾರಣಾಂತರಗಳಿಂದ ಸೋಲಬೇಕಾಯಿತು. ಆದರೆ ಈ ಬಾರಿ ಅಂತಹ ಪರಿಸ್ಥಿತಿಯಿಲ್ಲ. ಈ ನಿಟ್ಟಿನಲ್ಲಿ ವಿವಿಧ ಭಾಗಗಳ ಅಂಜುಮನ್ ಇಸ್ಲಾಂ ಸಂಸ್ಥೆಯ ಪ್ರಮುಖರ ನಿಯೋಗ ಪಕ್ಷದ ಮುಖಂಡರನ್ನು ಭೇಟಿಯಾಗಿ ನಮ್ಮ ಬೇಡಿಕೆಯನ್ನು ಇಡುತ್ತೇವೆ ಎಂದು ತಿಳಿಸಿದರು.

ಶಿಗ್ಗಾವಿ ಶಾಸಕರಾಗಿದ್ದ ಬಸವರಾಜ್ ಬೊಮ್ಮಾಯಿ ಅವರು ಸಂಸದರಾಗಿ ಆಯ್ಕೆಯಾಗಿರುವ ಕಾರಣ ಉಪಚುನಾವಣೆ ಎದುರಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next