Advertisement

Shikaripur: ಭೀಕರ ರಸ್ತೆ ಅಪಘಾತ; ತೀರ್ಥಹಳ್ಳಿ ವ್ಯಕ್ತಿ ದುರ್ಮರಣ!

09:54 PM Sep 23, 2024 | Shreeram Nayak |

ಶಿಕಾರಿಪುರ : ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ ಮಾಡುತ್ತಿರುವ ವೇಳೆ ಬೈಕ್ ಒಂದು ಗುದ್ದಿದ ಪರಿಣಾಮ ರಸ್ತೆಯಲ್ಲಿ ಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಸೋಮವಾರ(ಸೆ.23) ಸಂಜೆ ನಡೆದಿದೆ.

Advertisement

ತೀರ್ಥಹಳ್ಳಿಯ ಯಡೇಹಳ್ಳಿಕೆರೆಯ ರಮೇಶ್ (54 ವರ್ಷ ) ಮೃತ ದುರ್ದೈವಿ. ಶಿಕಾರಿಪುರ ಸಮೀಪದ ಕೆಂಗಟ್ಟಿ ಮತ್ತು ಸಿದ್ದನ್ಪುರ ಗ್ರಾಮದ ಮುಖ್ಯ ರಸ್ತೆಯ ಬಳಿ ಲಾರಿ ಪಂಚರ್ ಆಗಿದ್ದಕ್ಕಾಗಿ ಲಾರಿಯನ್ನು ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿಕೊಂಡು ಟಯರ್ ಬದಲಾವಣೆ ಮಾಡುತ್ತಿರುವಾಗ ಶಿಕಾರಿಪುರದಿಂದ ಹೊನ್ನಳ್ಳಿ ಹೋಗುವ ಬೈಕ್ ಸವಾರ ಬಸವರಾಜ್ ಗುದ್ದಿದ ಪರಿಣಾಮವಾಗಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತೀರ್ಥಹಳ್ಳಿಯಿಂದ ಕೆಲಸದ ಮೇಲೆ ಲಾರಿಯನ್ನು ತೆಗೆದುಕೊಂಡು ರಮೇಶ್ ಶಿಕಾರಿಪುರಕ್ಕೆ ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ.

ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ತೆಗೆದುಕೊಂಡು ಹೋಗಲಾಗಿದ್ದು, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next