Advertisement

ಯಡಿಯೂರಪ್ಪ ರಾಜೀನಾಮೆ: ಸಂಪೂರ್ಣ ಸ್ಥಬ್ಧವಾದ ಶಿಕಾರಿಪುರ, ಅಂಗಡಿಗಳು ಬಂದ್

02:48 PM Jul 26, 2021 | Team Udayavani |

ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ ಬೆನ್ನಿಗೆ ಶಿಕಾರಿಪುರ ಸಂಪೂರ್ಣ ಸ್ಥಬ್ಧವಾಗಿದೆ. ಪಟ್ಟಣದಾದ್ಯಂತ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ.

Advertisement

ಶಿಕಾರಿಪುರ ಪಟ್ಟಣದ ಬಸ್ ನಿಲ್ದಾಣ ಸುತ್ತಮುತ್ತ, ಪೆಟ್ರೋಲ್ ಬಂಕ್ ರಸ್ತೆ, ಶಿಶುವಿಹಾರ ರಸ್ತೆ, ಎಸ್.ಹೆಚ್.ರಸ್ತೆ, ತಾಲೂಕು ಆಫೀಸ್ ರಸ್ತೆ, ಮಾಸೂರು ರಸ್ತೆಯಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

ಇದನ್ನೂ ಓದಿ:ರೈಸ್ ಮಿಲ್ ಕ್ಲರ್ಕ್ ಟು ಮುಖ್ಯಮಂತ್ರಿ ಗಾದಿವರೆಗೆ…ಬಿಎಸ್ ಯಡಿಯೂರಪ್ಪ ರಾಜಕೀಯ ಪಯಣ!

ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ ಪಟ್ಟಣದಲ್ಲಿ ವರ್ತಕರು ನಿರ್ಧಾರ ಮಾಡಿ, ಅಂಗಡಿಗಳನ್ನು ಬಂದ್ ಮಾಡಿದರು. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಶಿಕಾರಿಪುರ ಪಟ್ಟಣದಲ್ಲಿ ರಸ್ತೆಗಿಳಿದು ಘೋಷಣೆ ಕೂಗಿದ್ದಾರೆ. ಯಡಿಯೂರಪ್ಪ ಪರವಾಗಿ ಘೋಷಣೆಗಳನ್ನು ಕೂಗಿ, ಜೈಕಾರ ಕೂಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next