Advertisement

ಶಿಕಾರಿಪುರ: ಹನ್ನೊಂದು ತಿಂಗಳ ಮಗು ತೊಟ್ಟಿಯಲ್ಲಿ ಬಿದ್ದು ಸಾವು

07:35 PM Sep 25, 2022 | Team Udayavani |

ಶಿಕಾರಿಪುರ: ಹನ್ನೊಂದು ತಿಂಗಳ ಮಗು ನೀರಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಛಾಯಾಗ್ರಾಹಕ ದೇವರಾಜ್ ಅವರ ಪುತ್ರ ಅಕ್ಷಯ್ ಎಂದು ತಿಳಿದು ಬಂದಿದೆ. ಮಹಾಲಯ ಅಮವಾಸ್ಯೆ ಕಾರಣ ಕುಟುಂಬಸ್ಥರು ವಾಹನ ತೊಳೆಯಲು ಪೂಜೆ ಮಾಡುವ ಕಡೆ ಗಮನ ಕೊಟ್ಟ ಸಂದರ್ಭದಲ್ಲಿ ಅಂಬೆಗಾಲು ಇಡುತ್ತಿದ್ದ ಮಗು ಅರಿವಿಲ್ಲದೆ ತೊಟ್ಟಿಗೆ ಬಿದ್ದು ಸಾವನ್ನಪ್ಪಿದೆ.

ಸ್ವಲ್ಪ ಹೊತ್ತಿನ ನಂತರ ಮಗುವಿನ ತಾತ ವಾಹನ ತೊಳೆಯಲು ನೀರಿಗಾಗಿ ತೊಟ್ಟಿಯಲ್ಲಿ ಬಗ್ಗಿ ನೋಡಿದಾಗ ಮಗುವನ್ನು ಕಂಡು ದಿಗ್ಭ್ರಾಂತರಾಗಿದ್ದಾರೆ. ತಕ್ಷಣ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನವಾಗಲಿಲ್ಲ. ಮೃತ ಮಗುವಿನ ಮೊದಲ ವರ್ಷದ ಜನ್ಮದಿನ ಕೆಲವೇ ದಿನಗಳಲ್ಲಿ ಅಚರಿಸಲು ಕುಟುಂಬಸ್ಥರು ಸಿದ್ದತೆ ಮಾಡಿಕೊಳ್ಳುತ್ತಿದ್ದರು. ಆದರೆ ದುರ್ಘಟನೆಯಲ್ಲಿ ಮಗು ಸಾವನ್ನಪ್ಪಿದೆ. ಮಗುವಿನ ಅಂತ್ಯಕ್ರಿಯೆಯಲ್ಲಿ ಬಹುತೇಕ ಗ್ರಾಮಸ್ಥರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next