Advertisement

ಶಿವಮೊಗ್ಗ BJP ticket : ಯಡಿಯೂರಪ್ಪ ಭೇಟಿಯಾದ ಈಶ್ವರಪ್ಪ ಪುತ್ರ

02:47 PM Apr 13, 2023 | Team Udayavani |

ಬೆಂಗಳೂರು : ಕೆ.ಎಸ್. ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ನೀಡಿದ ಬೆನ್ನಲ್ಲೇ ಅವರ ಪುತ್ರ ಕೆ.ಈ.ಕಾಂತೇಶ್ ಅವರನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕರೆದು ಮಹತ್ವದ ಮಾತುಕತೆ ನಡೆಸಿದ್ದಾರೆ.

Advertisement

ಬೆಂಗಳೂರಿಗೆ ತೆರಳಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಯಡಿಯೂರಪ್ಪ ಅವರನ್ನು ಜಿ.ಪಂ ಮಾಜಿ ಸದಸ್ಯ ಕಾಂತೇಶ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇನ್ನೂ ಘೋಷಣೆಯಾಗದ ಶಿವಮೊಗ್ಗ ಕ್ಷೇತ್ರದ ಟಿಕೆಟ್ ವಿಚಾರ, ಕಾರ್ಯಕರ್ತರ ಆಕ್ರೋಶದ ಬಗ್ಗೆ ಮಾತುಕತೆ ನಡೆಸಿದ್ದು, ಕಾರ್ಯಕರ್ತರ ಅಪೇಕ್ಷೆಯಂತೆ ತಂದೆಯವರ ನಂತರ ತಮಗೆ ಟಿಕೆಟ್ ನೀಡುವಂತೆ ಕೇಳಿದ್ದಾರೆ ಎಂದು ಹೇಳಲಾಗಿದೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನೂ ಕಾಂತೇಶ ಭೇಟಿ ಮಾಡಿದ್ದಾರೆ. ಈ ವೇಳೆ ಈಶ್ವರಪ್ಪ ಅವರ ನಿವೃತ್ತಿ ನಿರ್ಧಾರದ ಬಗ್ಗೆ ಹಿರಿಯ ಮುಖಂಡರು ಮೆಚ್ಚುಗೆಯ ಮಾತನಾಡಿದ್ದಾರೆ ಎಂದು ವರದಿಯಾಗಿದೆ. ಹಿರಿಯ ನಾಯಕರು ಒಳ್ಳೆಯದಾಗುತ್ತೆ ಹೋಗಿ ಎಂದು ಭರವಸೆ ನೀಡಿ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next