Advertisement

ಕೋವಿಡ್ ಜಾಗೃತಿ ಕಾರ್ಯಕ್ರಮ

07:40 PM May 10, 2020 | Naveen |

ಶಿವಮೊಗ್ಗ: ಬಿಜೆಪಿ ಯುವ ಮೋರ್ಚಾದಿಂದ ನಗರದ ಗಾಂಧಿ ಬಜಾರ್‌ನಲ್ಲಿ ಗುರುವಾರ ಕೋವಿಡ್ ವೈರಸ್‌ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

Advertisement

ಕೋವಿಡ್ ವೈರಸ್‌ ಹರಡದಂತೆ ಸಾರ್ವಜನಿಕರು ಮುಂಜಾಗ್ರತಾ ಕ್ರಮ ಗಳನ್ನು ಅನುಸರಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರ ಬಾರದು. ಮನೆಯಿಂದ ಹೊರ ಬರುವಾಗ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲನೆ ಮಾಡಬೇಕು. ಎಲ್ಲೆಂದರಲ್ಲಿ ಉಗುಳಬಾರದು ಎಂದು ಅರಿವು ಮೂಡಿಸಲಾಯಿತು.

ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು ಪೊಲೀಸರು ಜೀವದ ಹಂಗನ್ನು ಮರೆತು ವೈರಸ್‌ ವಿರುದ್ಧ ಹೋರಾಟ ನಡೆಸಿದ್ದಾರೆ. ಸಾರ್ವಜನಿಕರು ಅವರಿಗೆ ಗೌರವ ನೀಡಬೇಕು ಎಂದು ಮನವಿ ಮಾಡಿದರು. ಶಿವಮೊಗ್ಗದಲ್ಲಿ ಇಲ್ಲಿಯವರೆಗೂ ಕೋವಿಡ್ ಪಾಸಿಟಿವ್‌ ಪ್ರಕರಣ ಕಂಡುಬಂದಿಲ್ಲ. ಇದರಿಂದಾಗಿ ಶಿವಮೊಗ್ಗ ಹಸಿರು ವಲಯದಲ್ಲಿ ಗುರುತಿಸಿಕೊಂಡಿದೆ ಎಂದರು.

ಪಾಲಿಕೆ ಮೇಯರ್‌ ಸುವರ್ಣ ಶಂಕರ್‌, ಉಪಮೇಯರ್‌ ಸುರೇಖಾ ಮುರಳಿಧರ್‌, ಪಾಲಿಕೆ ಸದಸ್ಯರಾದ ಇ. ವಿಶ್ವಾಸ್‌, ಸುನೀತ ಅಣ್ಣಪ್ಪ, ಬಿಜೆಪಿ ಪ್ರಮುಖರಾದ ಎನ್‌.ಜಿ. ನಾಗರಾಜ್‌, ಅಣ್ಣಪ್ಪ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next