Advertisement

ಒಂದೇ ಕುಟುಂಬದ ನಾಲ್ವರಿಗೆ ಕೋವಿಡ್

12:51 PM Jun 29, 2020 | Naveen |

ಶಿವಮೊಗ್ಗ: ನಗರದ ಬಸವನಗುಡಿಯಲ್ಲಿ ಒಂದೇ ಕುಟುಂಬದ ನಾಲ್ಕು ಜನರಿಗೆ ಕೋವಿಡ್ ಪಾಸಿಟಿವ್‌ ಬಂದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ.

Advertisement

ಇತ್ತೀಚೆಗೆ ಭದ್ರಾವತಿಯ ಬಸ್‌ ಏಜೆಂಟ್‌ ಒಬ್ಬರಿಗೆ ಕೋವಿಡ್ ಸೋಂಕಿರುವುದು ದೃಢಪಟ್ಟಿತ್ತು. ಆತ ನಗರದ ಬಸವನಗುಡಿಯಲ್ಲಿರುವ ಸಂಬಂಧಿಕರ ಮನೆಯಲ್ಲಿ ಮರ್‍ನಾಲ್ಕು ದಿನಗಳ ತಂಗಿದ್ದ. ಹೀಗಾಗಿ, ಕುಟುಂಬದಲ್ಲಿರುವವರಲ್ಲೂ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ ಬಸ್‌ ಏಜೆಂಟ್‌ನಾಗಿ ಕೆಲಸ ಮಾಡುತ್ತಿದ್ದ ಈತನೊಂದಿಗೆ ಎಂಟು ಜನ ಪ್ರಾಥಮಿಕ ಸಂಪರ್ಕದಲ್ಲಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ತಕ್ಷಣ ಎಂಟೂ ಜನರನ್ನು ಕ್ವಾರಂಟೈನ್‌ ಮಾಡಲಾಗಿತ್ತು. ಅದರಲ್ಲಿ ನಾಲ್ವರಿಗೆ ಕೋವಿಡ್ ದೃಢಪಟ್ಟಿದೆ.

ಈತನೊಂದಿಗೆ ಇನ್ನೂ ಸಾಕಷ್ಟು ಜನ ಸಂಪರ್ಕದಲ್ಲಿದ್ದರು. ಅದನ್ನು ಪತ್ತೆ ಹಚ್ಚಲಾಗುತ್ತಿದೆ. ಹಾಗಾಗಿ, ಬಸವನಗುಡಿ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದ್ದು, ಸಾರ್ವಜನಿಕರ ಓಡಾಟದ ಮೇಲೆ ನಿಗಾ ಇಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next