Advertisement

ಶಿವಮೊಗ್ಗ:ಭೀಕರ ಅಪಘಾತದಲ್ಲಿ ಯುವಕರಿಬ್ಬರ ದುರ್ಮರಣ 

09:33 AM Jan 17, 2018 | |

ಶಿವಮೊಗ್ಗ: ಆಯನೂರಿನ ವೀರಣ್ಣನ ಬೆನವಳ್ಳಿ ಬಳಿ  ಖಾಸಗಿ ಬಸ್ಸೊಂದು ಢಿಕ್ಕಿಯಾಗಿ  ಬೈಕ್‌ನಲ್ಲಿದ್ದ ಸವಾವರರಿಬ್ಬರು ದಾರುಣವಾಗಿ ಸಾವನ್ನಪ್ಪಿದ ದುರ್ಘ‌ಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

Advertisement

ಮೃತ ದುರ್‌ದೈವಿಗಳು ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಅಮಿತ್‌ ಮತ್ತು ಜಾನ್ಸನ್‌  ಎಂದು ತಿಳಿದು ಬಂದಿದೆ.

ಅಪಘಾತದ ತೀವ್ರತೆಗೆ ಜಾನ್ಸನ್‌ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಮಿತ್‌ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಬಗ್ಗೆ ವರದಿಯಾಗಿದೆ.

ಅವಘಡ ನಡೆದ ಸ್ಥಳದಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯ ಎಂದು  ಘೋಷಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ. 

ಕುಂಸಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next