Advertisement

Shimoga; ಶಿಕಾರಿಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ

11:20 AM Sep 26, 2024 | keerthan |

ಶಿಕಾರಿಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕುತಂತ್ರ ನಡೆಸುತ್ತಿರುವುದನ್ನು ಖಂಡಿಸಿ ತಾಲ್ಲೂಕು ಅಹಿಂದ ಸಂಘಟನೆ ಕರೆ ನೀಡಿದ ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು,ಅಂಗಡಿ ಮುಗ್ಗಟ್ಟು ಬಂದ್ ಆಗಿವೆ. ಅಹಿಂದ ಸಂಘಟನೆಯಿಂದ ಪ್ರತಿಭಟನೆ ನಡೆಯಿತು.

Advertisement

ಪಟ್ಟಣ ಬಸ್ ನಿಲ್ದಾಣ ಸಮೀಪದಿಂದ ಅಹಿಂದ ಸಂಘಟನೆ ಆಶ್ರಯದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು.

ಯಡಿಯೂರಪ್ಪ ವಿಜಯೇಂದ್ರ ವಿರುದ್ಧ ಧಿಕ್ಕಾರ ಕೂಗಿದರು. ಶಾಲಾ ಕಾಲೇಜುಗಳು ಎಂದಿನಂತೆ ನಡೆದವು.

Advertisement

Udayavani is now on Telegram. Click here to join our channel and stay updated with the latest news.

Next