Advertisement

Shimoga incident; ರಾಗಿಗುಡ್ಡದಲ್ಲಿ ಬಿಜೆಪಿ ನಾಯಕರ ತಂಡದಿಂದ ಸತ್ಯ ಶೋಧನೆ

11:45 AM Oct 05, 2023 | keerthan |

ಶಿವಮೊಗ್ಗ: ಕೆಲ ದಿನಗಳ ಹಿಂದೆ  ಈದ್ ಮಿಲಾದ್ ಮೆರವಣಿಗೆಯಲ್ಲಿ ಗಲಾಟೆ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತಂಡವು ಇಂದು ರಾಗಿ ಗುಡ್ಡಕ್ಕೆ ಭೇಟಿ ನೀಡಿ ಸತ್ಯ ಶೋಧನೆ ಮಾಡಲಿದೆ.

Advertisement

ಬಿಜೆಪಿ ರಾಜಾಧ್ಯಕ್ಷ ನಳೀನ್ ಕುಮಾರ್ ನೇತೃತ್ವದಲ್ಲಿ ಸತ್ಯ ಶೋಧನಾ ತಂಡ ಈಗಾಗಲೇ ಶಿವಮೊಗ್ಗಕ್ಕೆ ಆಗಮಿಸಿದೆ. ಕೇಲವೇ ಕ್ಷಣದಲ್ಲಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಲಿದೆ. ನಂತರ ರಾಗಿಗುಡ್ಡ ಭೇಟಿ ನೀಡಿ ಮನೆ ಹಾನಿ ಪರಿಶೀಲನೆ ನಡೆಸಲಿದೆ.

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವರಾದ ಅಶ್ವತ್ ನಾರಾಯಣ್, ಕೋಟಾ ಶ್ರೀನಿವಾಸ್ ಪೂಜಾರಿ, ಕೆ.ಎಸ್ ಈಶ್ವರಪ್ಪ, ಸಂಸದ ರಾಘವೇಂದ್ರ ಸೇರಿದಂತೆ ಬಿಜೆಪಿ ನಾಯಕರ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ.

ಒಂದು ಗಂಟೆಗೆ ಬಿಜೆಪಿ ಕಾರ್ಯಾಲಯದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next