Advertisement

ಶಿವಮೊಗ್ಗ: ಲಾಕ್ ಡೌನ್ ಸಂದರ್ಭದಲ್ಲಿ ಹೆಚ್ಚಾದ ದನಗಳ್ಳರ ಹಾವಳಿ

03:48 PM Jun 03, 2021 | Team Udayavani |

ಶಿವಮೊಗ್ಗ: ಲಾಕ್ ಡೌನ್ ಸಂದರ್ಭ ದನಗಳ್ಳರ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರು ಅವರನ್ನು ಹಿಡಿಯಲು ಮುಂದಾದ ವೇಳೆ ಕಳ್ಳರು ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಎಸ್ಕೇಪ್ ಆದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಅದರ ವಿಡಿಯೋ ಇದೀಗ ವೈರಲ್ ಆಗಿದೆ.

Advertisement

ಕಳೆದ ರಾತ್ರಿ ದನಗಳ್ಳತನ ಮಾಡುತ್ತಿದ್ದಾಗ ಸ್ಥಳೀಯರು ಅವರನ್ನು ಹಿಡಿಯಲು ಮುಂದಾಗಿದ್ದಾರೆ. ಈ  ವೇಳೆ ದನಗಳ್ಳರು ತಮ್ಮ ಕಾರನ್ನು ಸುಮಾರು ಒಂದು ಕಿಲೋ ಮೀಟರ್ ನಷ್ಟು  ದೂರ  ರಿವರ್ಸ್ ಗೇರ್ನಲ್ಲಿ ಚಲಾಯಿಸಿದ್ದಾರೆ.

ಇದನ್ನೂ ಓದಿ:  ಒಂದು ವಾರ ಲಾಕ್ ಡೌನ್ ವಿಸ್ತರಿಸಿ, ತಲಾ 10 ಸಾವಿರ ಪರಿಹಾರ ಘೋಷಿಸಿ: ಕುಮಾರಸ್ವಾಮಿ

ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ದನವೊಂದನ್ನು ಕಾರಿಗೆ ತುಂಬಿಕೊಳ್ಳುತ್ತಿದ್ದಾಗ ತೀರ್ಥಹಳ್ಳಿಯ ಯುವ ಕಾಂಗ್ರೆಸ್ ಮುಖಂಡ ಸುದೀಪ್ ಶೆಟ್ಟಿ ಮತ್ತು ಅವರ ಸ್ನೇಹಿತ ಜಾವೇದ್ ಇದನ್ನು ಗಮನಿಸಿ ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ದನವನ್ನು ಬಿಟ್ಟು ಮೂವರು ಕಳ್ಳರು ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ. ಲಾಕ್ ಡೌನ್ ಅವಧಿಯಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಪೊಲೀಸ್ ಭದ್ರತೆ ಕುರಿತು ಪ್ರಶ್ನೆ ಎತ್ತುತ್ತಿದೆ.

Advertisement

ಇದನ್ನೂ ಓದಿ: ಕಾಂಗ್ರೆಸ್ ಮಾತು ಕೇಳಿದರೆ ಜೀವ ಹೋಗುತ್ತವೆ,ಬಿಜೆಪಿ ಮಾತು ಕೇಳಿದರೆ ಜೀವ ಉಳಿಯುತ್ತದೆ: ರಾಮುಲು

Advertisement

Udayavani is now on Telegram. Click here to join our channel and stay updated with the latest news.

Next