Advertisement

Shimoga: ಭದ್ರಾವತಿ ಶಾಸಕರು ಹಾಗೂ ಪೊಲೀಸ್ ಇಲಾಖೆ ವಿರುದ್ಧ ಪ್ರತಿಭಟನೆ

02:32 PM Jan 10, 2024 | keerthan |

ಶಿವಮೊಗ್ಗ: ಭದ್ರಾವತಿಯಲ್ಲಿ ಓಸಿ, ಇಸ್ಪಿಟ್, ಗಾಂಜಾ ಹಾವಳಿ ಹೆಚ್ಚಾಗಿದೆ. ಶಾಸಕರು ಹಾಗೂ ಅವರ ಪುತ್ರನ ಕುಮ್ಮಕ್ಕಿನಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ. ಸುಳ್ಳು ಕೇಸ್ ದಾಖಲಿಸಿ, ಭಯದ ವಾತವರಣ ನಿರ್ಮಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಶಾಸಕರು ಹಾಗೂ ಪೊಲೀಸ್ ಇಲಾಖೆ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

Advertisement

ಪ್ರತಿಭಟನೆಯಲ್ಲಿ ವಿವಿಧ ಪಕ್ಷ ಹಾಗೂ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದು, ಶಿವಮೊಗ್ಗ ಎಸ್ಪಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಗುತ್ತದೆ.

ಅಕ್ರಮ ಧಂಧೆಗೆ ಕಡಿವಾಣ ಹಾಕುವ ಜೊತೆಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿಗೌಡ, ಮಾಜಿ ಶಾಸಕ ಪ್ರಸನ್ನ ಕುಮಾರ್, ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್ ಸೇರಿದಂತೆ ನೂರಾರು ಜನರು ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next