Advertisement

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

11:36 AM Sep 28, 2024 | keerthan |

ಶಿವಮೊಗ್ಗ: ಸಿದ್ದರಾಮಯ್ಯ ಪರ ನಿಂತಿರುವ ಮಂತ್ರಿಮಂಡಲ ಅವರು ರಾಜೀನಾಮೆ ಕೊಡಲ್ಲ ಎನ್ನುತ್ತಿದ್ದಾರೆ. ಮಂತ್ರಿಗಳೇ ಜಡ್ಜ್ ಗಳಾಗಿ ಬಿಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಲ್ಲಿದ್ದರೆ ತನಿಖೆಗೆ ನ್ಯಾಯ ಸಿಗುವುದಿಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಶಾಸಕ ಚನ್ನಬಸಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಕೊಟ್ಟು ಹೊರಗೆ ಬರುವುದು ನೈತಿಕತೆಯ ವ್ಯವಸ್ಥೆ. ಕಾಂಗ್ರೆಸ್ ನವರು ಸಿದ್ದರಾಮಯ್ಯ ಏನು ಮಾಡಿಲ್ಲ ಎನ್ನುತ್ತಿದ್ದಾರೆ. ಮಂತ್ರಿಗಳೆಲ್ಲ ರಾಜೀನಾಮೆ ಕೊಟ್ಟು ನ್ಯಾಯಾಧೀಶರಾಗಿಬಿಡಿ. ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರ ಮೇಲೆ ನಂಬಿಕೆ ಇಲ್ಲ. ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ವಿರುದ್ದ ಎಫ್ ಐಆರ್ ದಾಖಲಾಗಿದೆ. ನ್ಯಾಯಾಲಯದ ಆದೇಶ ಪ್ರಕಾರ ಎಫ್ ಐ ಆರ್ ದಾಖಲಾಗಿದೆ. ಮುಡಾ ಹಗರಣದ ಬಗ್ಗೆ ತನಿಖೆ ಮಾಡಿ ತಪಿಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಕೋರ್ಟ್ ಆದೇಶ ನೀಡಿದೆ. ನ್ಯಾಯಾಲಯ ಹೇಳುವ ಮುಂಚೆಯೇ ಹಗರಣದ ಬಗ್ಗೆ ಬಿಜೆಪಿ ಪಕ್ಷ ಪ್ರಾಮಾಣಿಕವಾಗಿ ಜನರಿಗೆ ತಿಳಿಸುವ ಕೆಲಸ ಮಾಡಿತ್ತು. ಆಗ ಧಿಕ್ಕಾರದ ಧೋರಣೆ ಕಾಂಗ್ರೆಸ್ ಅನುಸರಿಸಿತ್ತು. 187 ಕೋಟಿ ಹಗರಣ ಆಗಿದ್ದರೂ ಮಂತ್ರಿ ಮೇಲೆ ಎಫ್ಐಆರ್ ದಾಖಲು ಮಾಡಲಿಲ್ಲ. ಆಗ ಇಡಿ ಅವರು ಎಂಟ್ರಿಯಾಗಿ ಸಚಿವರ ಮೇಲೆ ಎಫ್ಐಆರ್ ದಾಖಲು ಮಾಡಿತ್ತು ಎಂದು ಚನ್ನಬಸಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next