Advertisement

ಹರ್ಷ ಕುಟುಂಬಕ್ಕೆ ಬೆದರಿಕೆ ಬಂದಿಲ್ಲ: ಎಸ್ಪಿ

10:22 PM Oct 27, 2022 | Team Udayavani |

ಶಿವಮೊಗ್ಗ: ಕೆಲವು ತಿಂಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಜರಂಗ ದಳದ ಕಾರ್ಯಕರ್ತ ಹರ್ಷ ಅವರ ಕುಟುಂಬದ ಸದಸ್ಯರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿದ್ದಾರೆಂಬ ಆರೋಪದ ಬಗ್ಗೆ ತನಿಖೆ ನಡೆಸಲಾಗಿದೆ. ಆದರೆ ಈವರೆಗೆ ಬೆದರಿಕೆ ಹಾಕಿರುವುದಕ್ಕೆ ಪೂರಕವಾದ ಅಂಶಗಳು ಕಂಡುಬಂದಿಲ್ಲ ಎಂದು ಶಿವಮೊಗ್ಗ ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್‌ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇವಲ ಹರ್ಷ ಸಹೋದರಿ ಅಶ್ವಿ‌ನಿ ಕುಟುಂಬಕ್ಕೆ ಮಾತ್ರವಲ್ಲ, ಇಡೀ ಶಿವಮೊಗ್ಗಕ್ಕೆ ರಕ್ಷಣೆ ನೀಡಲು ಇಲಾಖೆ ಸಿದ್ಧವಿದೆ. ಘಟನೆ ಕುರಿತು ದೊಡ್ಡಪೇಟೆ ಠಾಣೆ ಪೊಲೀಸರ ಮೇಲೆ ಯಾವುದೇ ಒತ್ತಡ ಬಂದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಕಾಲಿಗೆ ಗುಂಡು ಇಲ್ಲಿನ ವೆಂಕಟೇಶ ನಗರದ ವಿಜಯ್‌ ಎಂಬುವವರ ಕೊಲೆಗೆ ಸಂಬಂಧಿಸಿ ಎ1 ಆರೋಪಿ ಜಬಿ (23) ಮಹಜರ್‌ಗೆ ಹೋದ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದೂ ಎಸ್ಪಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next