Advertisement

ಈಶ್ವರಪ್ಪಗೆ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್‌: ಬಿಎಸ್‌ವೈ

06:40 AM Apr 01, 2018 | Team Udayavani |

ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಸಮಸ್ಯೆ ಕೊನೆಗೂ ಬಗೆಹರಿದಿದೆ. ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪನವರಿಗೇ ಟಿಕೆಟ್‌ ಎಂದು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪನವರೇ ಹೇಳಿರುವುದರಿಂದ ಈಶ್ವರಪ್ಪ ನಿರಾಳರಾಗಿದ್ದಾರೆ. ಹಲವು ತಿಂಗಳಿಂದ ಗೊಂದಲ ಸೃಷ್ಟಿಸಿದ್ದ  ಕ್ಷೇತ್ರದ ಸಮಸ್ಯೆ ಹಾಗೂ ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯ ನಿವಾರಿಸಲು ಅಮಿತ್‌ ಶಾ ನಡೆಸಿದ “ಮಧ್ಯರಾತ್ರಿ ಸಂಧಾನ’ ಯಶಸ್ವಿಯಾದಂತಾಗಿದೆ. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,  ಈ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್‌. ರುದ್ರೇಗೌಡರಿಗೆ ವಿಧಾನ ಪರಿಷತ್‌ ಸದಸ್ಯರಾಗುವ ಅವಕಾಶ ಕಲ್ಪಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next