Advertisement

ವಲಸೆ ಹೋದ ಬಂಜಾರರ ರಕ್ಷಣೆಗೆ ಆಗ್ರಹ

04:20 PM Apr 19, 2020 | Naveen |

ಶಿವಮೊಗ್ಗ: ರಾಜ್ಯದಿಂದ ಹೊರರಾಜ್ಯಕ್ಕೆ ವಲಸೆ ಹೋಗಿ ಸಂಕಷ್ಟಕ್ಕೆ ಸಿಲುಕಿರುವ ಬಂಜಾರ ಸಮುದಾಯದವರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕೆಂದು ಬಂಜಾರ ವಿದ್ಯಾರ್ಥಿ ಸಂಘದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

Advertisement

ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್‌ ಡಿ.ಆರ್‌. ಮಾತನಾಡಿ, ರಾಜ್ಯದ ಉತ್ತರ ಹಾಗೂ ಬೇರೆ ಬೇರೆ ಭಾಗಗಳಿಂದ ಬಂಜಾರ ಸಮುದಾಯದ ಸಹಸ್ರಾರು ಕುಟುಂಬಗಳು ಜೀವನೋಪಾಯಕ್ಕಾಗಿ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ ರಾಜ್ಯಕ್ಕೆ ವಲಸೆ ಹೋಗಿದ್ದಾರೆ. ಕೋವಿಡ್ ಲಾಕ್‌ಡೌನ್‌ನಿಂದ ಆಹಾರ, ವಸತಿಯಿಲ್ಲದೆ ಸಿಲುಕಿಕೊಂಡಿರುವ ಆವರು ತಮ್ಮ ನೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಅವರೆಲ್ಲರ ಹಿತರಕ್ಷಣೆಗೆ ಸರ್ಕಾರ ಮುಂದಾಗ ಬೇಕೆಂದು ಒತ್ತಾಯಿಸಿದರು.

ಈ ವೇಳೆ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಕುಮಾರ್‌ ನಾಯ್ಕ, ಬಂಜಾರ ಮುಖಂಡರಾದ ಕುಮಾರ್‌ ನಾಯ್ಕ ಬಿ., ಉಮಾಮಹೇಶ್ವರ ನಾಯ್ಕ, ಸುನೀಲ್‌ ನಾಯ್ಕ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next