Advertisement

ಶಿವಮೊಗ್ಗ ದಸರಾದ ಜಂಬೂ ಸವಾರಿ ಆರಂಭ: ಅಂಬಾರಿ ಹೊತ್ತು ಸಾಗಿದ ಸಾಗರ

04:24 PM Oct 05, 2022 | Team Udayavani |

ಶಿವಮೊಗ್ಗ: ಶಿವಮೊಗ್ಗ ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಆರಂಭಗೊಂಡಿದ್ದು, ಅದ್ಧೂರಿಯಾಗಿ ನಡೆಯುತ್ತಿದೆ. ಕೋಟೆ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ನಂದಿಕೋಲಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

Advertisement

ಸಕ್ರೆಬೈಲಿನ ಸಾಗರ ಆನೆ ಚಾಮುಂಡೇಶ್ವರಿ ಮೂರ್ತಿ ಇರುವ ಬೆಳ್ಳಿ ಅಂಬಾರಿಯನ್ನು ಹೊತ್ತು ಮುಂದೆ ಸಾಗುತ್ತಿದ್ದಾನೆ. ಸಾಗರ ಆನೆಗೆ ಭಾನುಮತಿ, ನೇತ್ರ ಆನೆಗಳು ಸಾಥ್‌ ನೀಡುತ್ತಿದ್ದು, ಇದನ್ನು ನೋಡಲು  ಜನಸಾಗರ ಹರಿದು ಬರುತ್ತಿದೆ.

ಇದನ್ನೂ ಓದಿ:ಮೈಸೂರಿನಲ್ಲಿ ವೈಭವದ ಜಂಬೂ ಸವಾರಿ: ಅರ್ಜುನನಿಗೆ ಜೈಕಾರ; ಹಲವು ತಂಡಗಳ ಕಲಾಪ್ರದರ್ಶನ

ಕೋಟೆ ರಸ್ತೆಯಲ್ಲಿ ಮೆರವಣಿಗೆ ಆರಂಭವಾಗಿದ್ದು ಕೋಟೆ ರಸ್ತೆಯ ಮೂಲಕ ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪ ನಾಯಕ ಪ್ರತಿಮೆ, ಎ.ಎ.ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ ಮಾರ್ಗವಾಗಿ ಹಳೇ ಜೈಲು ತಲುಪಲಿದೆ. ಅಲ್ಲಿಂದ ಫ್ರೀಡಂ ಪಾರ್ಕ್‌ನಲ್ಲಿ ನಿರ್ಮಿಸಿರುವ ಬನ್ನಿ ಮಂಟಪದಲ್ಲಿ ಕೊನೆಗೊಳ್ಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next