Advertisement

ಶಿರಾಡಿ ಘಾಟ್‌ ರಸ್ತೆಯಲ್ಲಿ ಬಸ್‌ಗಳ ಸಂಚಾರಕ್ಕೆ ಅವಕಾಶ

08:19 PM Aug 04, 2022 | Team Udayavani |

ಸಕಲೇಶಪುರ: ದೋಣಿಗಾಲ್‌ ಹೆಗ್ಗದ್ದೆವರೆಗಿನ ಶಿರಾಡಿ ಘಾಟ್‌ ರಸ್ತೆಯಲ್ಲಿ ಸಂಜೆ 6 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಎಲ್ಲಾ ರೀತಿಯ ಖಾಸಗಿ ಮತ್ತು ಸಾರ್ವಜನಿಕ ಬಸ್‌ಗಳಿಗೆ ಏಕಮುಖವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ.

Advertisement

ಈ ಕುರಿತು ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಪ್ರಕಟಣೆ ಹೊರಡಿಸಿದ್ದಾರೆ. ದೋಣಿಗಾಲ್‌ ಸಮೀಪ ಭೂ ಕುಸಿತದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆ 6ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು.

ಇದೀಗ ಮಡಿಕೇರಿ-ಸಂಪಾಜೆ ನಡುವಿನ ಕೋಯನಾಡು ಸಮೀಪ ರಸ್ತೆ ಬಿರುಕು ಬಿಟ್ಟಿದ್ದು ಕೇವಲ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅಲ್ಲಿ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದೋಣಿಗಾಲ್‌ ಹೆಗ್ಗದ್ದೆವರೆಗಿನ ಶಿರಾಡಿ ಘಾಟ್‌ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬಸ್‌ಗಳ ಸಂಚಾರಕ್ಕೆ ನಿಷೇಧ ಹೇರಿದ್ದರಿಂದ ಹಾಸನ-ಸಕಲೇಶಪುರ ನಡುವೆ ಸಂಚರಿಸುವ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next