Advertisement
ತಾಲೂಕಿನ ದೋಣಿಗಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಉಂಟಾದ ಹಿನ್ನಲೆಯಲ್ಲಿ ಕಳೆದ ಒಂದು ವಾರದ ಹಿಂದೆ ಈ ಮಾರ್ಗವಾಗಿ ಮಂಗಳೂರು- ಬೆಂಗಳೂರು ಕಡೆ ವಾಹನಗಳಲ್ಲಿ ಸಂಚರಿಸಲು ನಿರ್ಬಂಧ ಹೇರಲಾಗಿತ್ತು. ಇದೀಗ ಗುತ್ತಿಗೆದಾರರು ಮಳೆ ಬಿಡುವು ಬಿಟ್ಟ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಎಮ್ ಸ್ಯಾಂಡ್ ಮೂಟೆಗಳನ್ನು ಹಾಗೂ ಪ್ಲಾಸ್ಟಿಕ್ ಹೊದಿಕೆಗಳನ್ನು ಭೂಕುಸಿತದ ಸ್ಥಳದಲ್ಲಿ ಹಾಕಿ ತಾತ್ಕಾಲಿಕವಾಗಿ 20 ಟನ್ ಒಳಗಿನ 6 ಚಕ್ರದ ವಾಹನಗಳು, ಸಾರ್ವಜನಿಕರು ಸಂಚರಿಸುವ ಬಸ್ಗಳು ಹಾಗೂ ಎಲ್ಲಾ ರೀತಿಯ ಲಘು ವಾಹನಗಳಿಗೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಏಕಮುಖ ಸಂಚಾರಕ್ಕೆ ಅವಕಾಶ ಕೊಡಲಾಗಿದೆ.
Advertisement
ಶಿರಾಡಿ ಘಾಟ್ : 6 ಚಕ್ರವಾಹನಗಳು, ಲಘುವಾಹನಗಳ ಸಂಚಾರಕ್ಕೆ ಅವಕಾಶ
07:36 PM Jul 21, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.