Advertisement

ಶಿರಾಡಿ ರಸ್ತೆ ಕಾಮಗಾರಿ: ಜಿಲ್ಲಾಧಿಕಾರಿ ಪರಿಶೀಲನೆ

06:00 AM Jun 24, 2018 | |

ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಕಲೇಶಪುರದ ಕೆಂಪುಹೊಳೆಯಿಂದ ಶಿರಾಡಿ ಗ್ರಾಮದ ಅಡ್ಡಹೊಳೆ ತನಕ ನಡೆಯುತ್ತಿರುವ ಶಿರಾಡಿ ಘಾಟಿ ರಸ್ತೆ 2ನೇ ಹಂತದ ಕಾಂಕ್ರೀಟ್‌ ಕಾಮಗಾರಿಯನ್ನು ದ.ಕ. ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಪರಿಶೀಲನೆ ನಡೆಸಿದರು.

Advertisement

ಶುಕ್ರವಾರ ಕಾಮಗಾರಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಯವರು ಕಾಂಕ್ರೀಟ್‌ ಕಾಮಗಾರಿಗೆ ಬಳಸುವ ಜರ್ಮನ್‌ ಯಂತ್ರ, ಮಿಕ್ಸಿಂಗ್‌ ಯಂತ್ರ ಹಾಗೂ ಯುನಿಟ್‌ ಕೇಂದ್ರವನ್ನು ಪರಿಶೀಲಿಸಿದರು. ಕಾಮಗಾರಿಯ ಕುರಿತು ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್‌ ಮತ್ತು ಗುತ್ತಿಗೆದಾರರಿಂದ ಮಾಹಿತಿ ಪಡೆದುಕೊಂಡರು. ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್‌ ಮುನಿ ರಾಜ್‌ ಹಾಗೂ ಕಾಮಗಾರಿ ನಿರ್ವ ಹಣೆಯ ಓಶಿಯನ್‌ ಕನ್‌ಸ್ಟ್ರಕ್ಷನ್‌ ಸಂಸ್ಥೆಯ ನಿರ್ದೇಶಕ ಶರ್ಪುದ್ದೀನ್‌ ಅವರು ಮಾಹಿತಿ ನೀಡಿದರು.

ಹೆದ್ದಾರಿ ಕಾಂಕ್ರೀಟೀಕರಣ ಹಾಗೂ ಸೇತುವೆಗಳ ನಿರ್ಮಾಣ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸುವ ಮುನ್ನವೇ ಫ‌ುಟ್‌ಪಾತ್‌ ಕಾಮಗಾರಿಯನ್ನೂ ಪೂರ್ಣ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಪುತ್ತೂರು ತಹಶೀಲ್ದಾರ್‌ ಅನಂತ ಶಂಕರ, ಉಪ್ಪಿನಂಗಡಿ ಪ್ರಭಾರ ಕಂದಾಯ ನಿರೀಕ್ಷಕ ರಮಾನಂದ ಚಕ್ಕಡಿ ಜತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next