Advertisement

ಶಿರಾಳಕೊಪ್ಪ: ಕ್ರೀಡಾಕೂಟದಲ್ಲಿ ಜಗಳ; ಬಿಗುವಿನ ವಾತಾವರಣ, ಅಂಗಡಿಗಳು ಬಂದ್

05:41 PM Aug 22, 2022 | Team Udayavani |

ಶಿರಾಳಕೊಪ್ಪ: ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಶುರುವಾದ ಗಲಾಟೆಯಿಂದಾಗಿ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸೋಮವಾರ ದಿಢೀರ್ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.

Advertisement

ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ವಲಯ ಮಟ್ಟದ ಶಾಲಾ ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರಕ್ಕಾಗಿ ಗಲಾಟೆಯಾಗಿದೆ. ಮಕ್ಕಳೊಂದಿಗೆ ಬಂದಿದ್ದ ಪೋಷಕರು ಕೂಡ ಮಾತಿಗೆ ಮಾತು ಬೆಳೆಸಿದ್ದಾರೆ. ಬಳಿಕ ಕ್ರೀಡಾಂಗಣದಿಂದ ಹೊರ ಬಂದ ವೇಳೆ ಗಲಾಟೆ ಹೆಚ್ಚಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಯುವಕನ ಮೇಲೆ ಹಲ್ಲೆ

ಕ್ರೀಡಾಂಗಣದಿಂದ ಹೊರ ಬಂದ ಒಂದು ಕೋಮಿನ ಯುವಕರ ಗುಂಪು ಮತ್ತೊಂದು ಕೋಮಿನ ಗುಂಪಿನ ಯುವಕನ ಮೇಲೆ ಹಲ್ಲೆ ನಡೆಸಿದೆ. ಇದರಿಂದ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.

ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದು, ಗಸ್ತು ಆರಂಭಿಸಿದ್ದಾರೆ. ಗಲಾಟೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next