Advertisement

ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರಿಂದ ವಿಶೇಷ ಪೂಜೆ

09:19 PM Sep 12, 2021 | Team Udayavani |

ಶಿರಸಿ: ಸೋದೆ ವಾದಿರಾಜ‌ಮಠದ  ಶ್ರೀ ವಿಶ್ವೋತ್ತಮ ತೀರ್ಥ ಶ್ರೀಪಾದಂಗಳವರ ಆರಾಧನಾ ಪ್ರಯುಕ್ತ ಅವರ ಮೂಲವೃಂದಾವನಕ್ಕೆ ವಿಶೇಷ ಪೂಜೆಯನ್ನು ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ನಡೆಸಿದರು.

Advertisement

ನಂತರ ಭೀಮನಕಟ್ಟೆ ಮಠಾಧೀಶ ಶ್ರೀರಘುವರೇಂದ್ರ ತೀರ್ಥರ ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥರ ಉಪಸ್ಥಿತಿಯಲ್ಲಿ ಗುರುಸಂಸ್ಮರಣಾ ಕಾರ್ಯಕ್ರಮ ನಡೆಯಿತು. ವಿದ್ವಾಂಸರಾದ ನಿಪ್ಪಾಣಿ ಗುರುರಾಜ ಆಚಾರ್ಯರು ಹಾಗೂ ಮಂಗಳೂರಿನ ಶಾರದಾ ವಿದ್ಯಾಲಯದ ಮತ್ತು ಕರ್ನಾಟಕ ವಿಶ್ವಹಿಂದೂ ಪರಿಷತ್ ನ ಅಧ್ಯಕ್ಷ ಎಂ.ಬಿ. ಪುರಾಣಿಕರು ಗುರುಸಂಸ್ಮರಣೆಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಶ್ರೀಮಠದಿಂದ ಪ್ರಕಾಶನಗೊಂಡ ನಿಪ್ಪಾಣಿ ಗುರುರಾಜ ಆಚಾರ್ಯರು ಸಂಪಾದಿಸಿದ ಶ್ರೀವಾದಿರಾಜ ಗುರುಸಾರ್ವಭೌಮರ ಸ್ವಪ್ನ ಪದ  ಹಾಗೂ ಹರಿಸರ್ವೋತ್ತಮ ಸಾರ ಎಂಬ ಪುಸ್ತಕವನ್ನು ಯತಿತ್ರಯರು ಬಿಡುಗಡೆಗೊಳಿಸಿ ಆರಾಧನಾ ಸಂದೇಶ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next