Advertisement

ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ; ಪೇಜಾವರಶ್ರೀ

03:06 PM Jul 19, 2018 | Team Udayavani |

ಹುಬ್ಬಳ್ಳಿ/ಉಡುಪಿ:ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಾವಿನ ಬಗ್ಗೆ ತನಿಖೆ ನಡೆಸಿ ಎಂದು ಒತ್ತಾಯಿಸಲ್ಲ. ಅಲ್ಲದೇ ಶೀರೂರು ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲ್ಲ ಎಂದು ಪೇಜಾವರಶ್ರೀ ತಿಳಿಸಿದ್ದಾರೆ.

Advertisement

ಶೀರೂರು ಶ್ರೀಗಳ ನಿಧನದ ಕುರಿತು ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು,ನಾನು ಹುಬ್ಬಳ್ಳಿಯಲ್ಲಿ ಇದ್ದಿರುವ ಕಾರಣ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಗುತ್ತಿಲ್ಲ ಎಂದು ಹೇಳಿದರು.

ಅವರು ಅನಾರೋಗ್ಯದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಷ್ಟೇ ನನಗೆ ಗೊತ್ತಿರೋದು. ಅವರು ಎಲ್ಲಿ ಊಟ ಮಾಡಿದ್ದಾರೆ. ಎಲ್ಲಿಗೆ ಹೋಗಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ವಿಷ ಪ್ರಾಶನವಾಗಿದ್ದರೆ ವೈದ್ಯರು ವರದಿ ಕೊಡುತ್ತಾರೆ. ಪಟ್ಟದ ದೇವರ ವಿಷಯಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಪೂರ್ವಾಶ್ರಮ ಸಹೋದರನಿಂದ ದೂರು ದಾಖಲು:

ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಂಶಯಾಸ್ಪದ ಸಾವಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಕೋರಿ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ ಅವರು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next