Advertisement

Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ

08:55 PM Oct 19, 2024 | Team Udayavani |

ಮಂಡ್ಯ: ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿಯ ಗುಡ್ಡ ಕುಸಿತ ದುರಂತದಲ್ಲಿ ಪಾಲಕರನ್ನು ಕಳೆದುಕೊಂಡು ಅನಾಥಳಾಗಿದ್ದ ಯುವತಿಗೆ ಮಂಡ್ಯದಲ್ಲಿ ನಡೆದ “ಮಂಡ್ಯ ಟೂ ಇಂಡಿಯಾ’ ಬೃಹತ್‌ ಉದ್ಯೋಗ ಮೇಳದಲ್ಲಿ ಉದ್ಯೋಗ ಲಭಿಸಿದ್ದು, ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ ನೇಮಕಾತಿ ಪತ್ರ ವಿತರಿಸಿದರು.

Advertisement

ಜು. 16ರಂದು ಸಂಭವಿಸಿದ ಶಿರೂರು ಗುಡ್ಡ ಕುಸಿತದಲ್ಲಿ ಮೃತರಾದ ಜನಾರ್ದನ್‌ ನಾಯ್ಕ ಪುತ್ರಿ ಕೃತ್ತಿಕಾ ಜೆ.ನಾಯ್ಕಗೆ ಕೇಂದ್ರ ಸರಕಾರಿ ಸ್ವಾಮ್ಯದ ಭಾರತ್‌ ಹೆವಿ ಎಲೆಕ್ಟ್ರಿಕಲ್‌ ಕಂಪೆನಿ (ಬಿಎಚ್‌ಇಲ್‌)ಯಲ್ಲಿ ಉದ್ಯೋಗ ದೊರೆತಿದೆ. ಈ ಹಿಂದೆ ದುರಂತ ಸ್ಥಳಕ್ಕೆ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾಗ ಕೃತ್ತಿಕಾಗೆ ಉದ್ಯೋಗ ನೀಡುವ ಭರವಸೆ ನೀಡಿದ್ದರು. 6150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ನೇರ ನೇಮಕಾತಿ ಪತ್ರ ನೀಡಲಾಗಿದೆ. ಉಳಿದವರಿಗೂ ಡಿಸೆಂಬರ್‌ ವೇಳೆಗೆ  ಉದ್ಯೋಗ ಕೊಡಿಸಲಾಗುವುದು ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next