Advertisement

Shirva ಹೇರೂರು: ಕೀಟನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ

09:08 PM Nov 21, 2023 | Team Udayavani |

ಶಿರ್ವ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಹೇರೂರು ಗ್ರಾಮದ ನಿವಾಸಿ ಸುಂದರ್‌ (59) ನ. 20ರಂದು ರಾತ್ರಿ ಮದ್ಯಪಾನ ಮಾಡಿ ಊಟ ಮಾಡುವಾಗ ಮನೆಯ ದಂಡೆಯ ಮೇಲೆ ಕುಳಿತವರು ಕುಸಿದು ಬಿದ್ದಿದ್ದು ಬಾಯಲ್ಲಿ ನೊರೆ ಬರುತ್ತಿತ್ತು. ಕೂಡಲೇ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯಾಧಿಕಾರಿಯವರು ಮೃತಪಟ್ಟಿದಾರೆಂದು ತಿಳಿಸಿದ್ದಾರೆ.

Advertisement

ವಿಪರೀತ ಕುಡಿತದ ಚಟ ಹೊಂದಿದ್ದ ಅವರು ಜೀವನದಲ್ಲಿ ಜುಗುಪ್ಸೆಗೊಂಡು ಮದ್ಯಪಾನದೊಂದಿಗೆ ಕೀಟನಾಶಕ ಸೇರಿಸಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರಿ ವೀಣಾಶ್ರೀ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next