Advertisement

Shirva ಹಿಂದೂ ಜೂನಿಯರ್‌ ಕಾಲೇಜು: ವಿದ್ಯಾರ್ಥಿಗಳ ದತ್ತುಸ್ವೀಕಾರ & ವಿದ್ಯಾರ್ಥಿವೇತನ ವಿತರಣೆ

04:19 PM Aug 22, 2023 | Team Udayavani |

ಶಿರ್ವ: ಇಲ್ಲಿನ ಹಿಂದೂ ಜೂನಿಯರ್‌ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ‌ ಮತ್ತು ವಿದ್ಯಾರ್ಥಿ ವೇತನ ವಿತರಣೆ ಸಮಾರಂಭವು ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿಗಾರ್‌ ಅವರ ಅಧ್ಯಕ್ಷತೆಯಲ್ಲಿ ಆ.19 ರಂದು ಕಾಲೇಜಿನ ಮುದ್ದು ಶೆಟ್ಟಿ ಸಭಾಂಗಣದಲ್ಲಿ ನಡೆಯಿತು.

Advertisement

ಶಿರ್ವ ವಿದ್ಯಾವರ್ಧಕ ಸಂಘದ ಸಂಚಾಲಕ ವಿ. ಸುಬ್ಬಯ್ಯ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಜೇಸಿಐ ರಾಷ್ಟ್ರೀಯ ತರಬೇತುದಾರ ಇನ್ನಾ ರಾಜೇಂದ್ರ ಭಟ್‌ ದಿಕ್ಸೂಚಿ ಭಾಷಣ ಮಾಡಿದರು. ವಿದ್ಯಾರ್ಥಿಗಳಿಗೆ 2 ಲ.ರೂ. ವಿದ್ಯಾರ್ಥಿ ವೇತನ ಸೇರಿದಂತೆ ಕಾಲೇಜಿನಲ್ಲಿ ನಡೆಯುವ ಕ್ರೀಡಾಕೂಟ, ವಾರ್ಷಿಕೋತ್ಸವ ಮತ್ತು ನಿರ್ವಹಣಾ ಕೆಲಸಗಳಿಗೆ ಒಟ್ಟು 4 ಲ. ರೂಗಳ ಕೊಡುಗೆಗಳನ್ನು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನೀಡಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಉಪನ್ಯಾಸಕ ವಿಷ್ಣು ಭಟ್‌ ದಂಪತಿ ಮತ್ತು ಕಳೆದ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ಪರೀಕ್ಷೆಯಲ್ಲಿ ರಾಜ್ಯಕ್ಕೆ 4 ನೇ ರ್‍ಯಾಂಕ್‌ ಗಳಿಸಿದ ಅಂಶಿ ಎಸ್‌. ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.

ಹಳೆವಿದ್ಯಾರ್ಥಿ ಸಂಘದ ಮುಂಬೈ ಸಮಿತಿಯ ಗೌರವ ಸಲಹೆಗಾರ ಕುತ್ಯಾರು ಕಿಶೋರ್‌ ಕುಮಾರ್‌ ಶೆಟ್ಟಿ, ಮುಂಬೈ ಸಮಿತಿಯ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಸೊರ್ಕಳ, ಉಪಾಧ್ಯಕ್ಷ ಶಿರ್ವ ಕೋಡು ಜಯಪ್ರಕಾಶ ಹೆಗ್ಡೆ, ಕೋಶಾಧಿಕಾರಿ ಉಮೇಶ್‌ ಆಚಾರ್ಯ, ಸಂಸ್ಥೆಯ ಪ್ರಾಂಶುಪಾಲ ಭಾಸ್ಕರ ಎ. ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ವಸಂತಿ ಬಾಯಿ ವೇದಿಕೆಯಲ್ಲಿದ್ದರು.

Advertisement

ಕಾರ್ಯಕ್ರಮದಲ್ಲಿ ಹಳೆವಿದ್ಯಾರ್ಥಿ ಸಂಘದ ಹಿರಿಯ ಸದಸ್ಯರು, ಕಾಲೇಜಿನ ಸಹ ಸಂಸ್ಥೆಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಗೂ ಹೆತ್ತವರು ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಸಚ್ಚಿದಾನಂದ ಹೆಗ್ಡೆ ಪ್ರಸ್ತಾವನೆಗೈದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿಗಾರ್‌ ಸ್ವಾಗತಿಸಿದರು. ನಿಕಟಪೂರ್ವ ಕಾರ್ಯದರ್ಶಿ ಪ್ರಶಾಂತ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಕೇಂಜ ಪವನ್‌ ಶೆಟ್ಟಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next