Advertisement

ಶಿರ್ವ -ಕಟ್ಟಿಂಗೇರಿ ಮೂಡುಬೆಳ್ಳೆ ಸಂಪರ್ಕ ರಸ್ತೆ ಸಂಚಾರ ಮುಕ್ತ

06:15 AM Jul 22, 2018 | Team Udayavani |

ಶಿರ್ವ: ಜಿಲ್ಲೆ ಯಾದ್ಯಂತ ಜುಲೈ ಮೊದಲ ವಾರ ಸುರಿದ ಮಹಾಮಳೆಗೆ ಕೊಚ್ಚಿಹೋಗಿದ್ದ ಶಿರ್ವ ಮಾಣಿಬೆಟ್ಟು ಗರಡಿಯ ಬಳಿ ಮೂಡುಬೆಳ್ಳೆ-  ಕಟ್ಟಿಂಗೇರಿ- ಶಿರ್ವ ಸಂಪರ್ಕ ರಸ್ತೆಯ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು ಎರಡೂ ಗ್ರಾಮಗಳ ಜನರ ಸಂಚಾರಕ್ಕೆ ಮುಕ್ತವಾಗಿದೆ. 

Advertisement

ಶಿರ್ವ ಮಾಣಿಬೆಟ್ಟು ಹಾಗೂ ಕಟ್ಟಿಂಗೇರಿ ಪರಿಸರದ ಜನ ನಿತ್ಯ ಕೆಲಸ ಕಾರ್ಯ ಹಾಗೂ ಶಾಲೆ ಕಾಲೇಜುಗಳಿಗೆ ಹೋಗಲು ಈ ರಸ್ತೆಯನ್ನೇ ಬಳಸುತ್ತಿದ್ದು  ರಸ್ತೆ ಕಡಿತಗೊಂಡಿದ್ದರಿಂದಾಗಿ ಜನ ಅತ್ತಿತ್ತ ಸಾಗಲು ಪರದಾಟ ನಡೆಸುತ್ತಿರುವ ಬಗ್ಗೆ ಪತ್ರಿಕೆ ಸಮಗ್ರ ವರದಿ ಪ್ರಕಟಿ ಸಿತ್ತು. ದಿನನಿತ್ಯಈ ಮಾರ್ಗದಲ್ಲಿ ಐದಾರು ಶಾಲಾ ವಾಹನಗಳು ಓಡಾಟ ನಡೆಸುತ್ತಿದ್ದು ರಸ್ತೆ ಕೊಚ್ಚಿ ಹೋಗಿದ್ದರಿಂದಾಗಿ ಜನರು, ಶಾಲಾ ವಿದ್ಯಾರ್ಥಿಗಳು ದೂರದ ಮಟ್ಟಾರು-ನಾಲ್ಕುಬೀದಿ ರಸ್ತೆಯನ್ನು ಬಳಸುತ್ತಿತ್ತು.
 
ಉದಯವಾಣಿ ವರದಿಗೆ ಸ್ಪಂದನೆ
ವರದಿಗೆ ಸ್ಪಂದಿಸಿದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 1 ಲಕ್ಷ ರೂ. ಬಿಡುಗಡೆ ಮಾಡಿ ತುರ್ತು ಕಾಮಗಾರಿ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಗುತ್ತಿಗೆದಾರ ಚಂದ್ರಶೇಖರ ಶೆಟ್ಟಿ ಕಾಮಗಾರಿ ನಡೆಸಿ ರಸ್ತೆ ಸರಿಪಡಿಸಿದ್ದಾರೆ. ಜಿ.ಪಂ.ಸದಸ್ಯ ವಿಲ್ಸನ್‌ ರೋಡ್ರಿಗಸ್‌ ಈ ರಸ್ತೆಗೆ ಸಂಕ ರಚಿಸುವ ಬಗ್ಗೆ ಅನುದಾನ ಜೋಡಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಕೈಗೊಳ್ಳುವಂತೆ ಗ್ರಾಮಸ್ಥರ ಪರವಾಗಿ ಸ್ಥಳೀಯ ಶಾಸಕ ಲಾಲಾಜಿ ಮೆಂಡನ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next