ಶಿರ್ವ: ಇಲ್ಲಿನ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ ಕಾಲೇಜಿನ ಪ್ರಾಂಶುಪಾಲೆ ಡಾ| ನಯನಾ ಎಂ. ಪಕ್ಕಳ ಅವರ ಬೀಳ್ಕೊಡುಗೆ ಸಮಾರಂಭವು ಫೆ. 28 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿ ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ|ವೈ. ಭಾಸ್ಕರ್ ಶೆಟ್ಟಿ ಮಾತನಾಡಿ ಯುವ ಮನಸ್ಸುಗಳನ್ನು ರೂಪಿಸುವಲ್ಲಿ ಡಾ|ನಯನ ಅವರ ಪಾತ್ರ ದೊಡ್ಡದು. ಅವರ ಸೇವಾವಧಿಯಲ್ಲಿ ಕಾಲೇಜಿಗೆ ನ್ಯಾಕ್ ಎ+ ಮಾನ್ಯತೆ ದೊರೆತಿರುವುದು ಅವರ ನಾಯಕತ್ವ ಗುಣಕ್ಕೆ ಕೈಗನ್ನಡಿ ಯಾಗಿದ್ದು, ಅವರು ಕಾಲೇಜಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿ ನೆಮ್ಮದಿಯ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾವರ್ಧಕ ಸಂಘದ ಸಂಚಾಲಕ ವಿ. ಸುಬ್ಬಯ್ಯ ಹೆಗ್ಡೆ ನಿವೃತ್ತರ ಮುಂದಿನ ಜೀವನಕ್ಕೆ ಶುಭಾಶಯ ಕೋರಿದರು. ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಡಾ| ಮಿಥುನ್ ಚಕ್ರವರ್ತಿ ಅವರನ್ನು ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು. ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ನಿವೃತ್ತರ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆಯ ಉಪ-ಪ್ರಾಂಶುಪಾಲೆ ನಿಶಾ ಶೆಟ್ಟಿ, ನಿವೃತ್ತ ಕಚೇರಿ ಅಧೀಕ್ಷಕ ರಮಾನಂದ ಶೆಟ್ಟಿಗಾರ್, ಹಿಂದೂ ಪ್ರೌಢ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶಕೀಲ ಹೆಗ್ಡೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ವೃಂದ, ನಿವೃತ್ತ ಸಿಬಂದಿವರ್ಗ, ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಡಾ| ಮಿಥುನ್ ಚಕ್ರವರ್ತಿ ಸ್ವಾಗತಿಸಿದರು.ಡಾ|ಸೋನಾ.ಎಚ್.ಸಿ ನಿರೂಪಿಸಿ, ಹೇಮಲತಾ ಶೆಟ್ಟಿ ವಂದಿಸಿದರು.