Advertisement

Shirva ಸ್ಫೋಟಕ ಬಳಸಿ ಕಲ್ಲುಗಣಿಗಾರಿಕೆ; ಸಾಮಗ್ರಿ ವಶಕ್ಕೆ

12:39 AM Dec 21, 2023 | Team Udayavani |

ಶಿರ್ವ: ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಿಲಾರು ಗ್ರಾಮದ ಪಿಲಾರುಕಾನದಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಕಲ್ಲುಗಣಿಗಾರಿಕೆ ನ‌ಡೆಸುತ್ತಿದ್ದ ಸ್ಥಳಕ್ಕೆ ಶಿರ್ವ ಠಾಣಾಧಿಕಾರಿ ಶಕ್ತಿವೇಲು ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಅಕ್ರಮ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ಸ್ಫೋಟಕ ಬಳಸಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದ ಕಾರಣ ಸ್ಥಳೀಯ ನಿವಾಸಿಗಳ ವಾಸ್ತವ್ಯಕ್ಕೆ ತೊಂದರೆಯಾಗುತ್ತಿತ್ತು. ಈ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

ಸ್ಥಳ ಪರಿಶೀಲನಾಧಿಕಾರಿ ಶ್ರೀನಿವಾಸ ಎಸ್‌.ಯು. ಮತ್ತವರ ತಂಡ ಪರಿಶೀಲನೆ ನಡೆಸುತ್ತಿದ್ದ ವೇಳೆ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಸ್ಫೋಟಕ ಬಳಸಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದುದು ಕಂಡುಬಂದಿದ್ದು, ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next