Advertisement

ಶಿರ್ವ ಶ್ರೀ ಸಿದ್ಧಿ ವಿನಾಯಕ ದೇಗುಲದಲ್ಲಿ ದೃಢಕಲಶ ಸಂಪನ್ನ

04:10 PM Oct 26, 2021 | Team Udayavani |

ಶಿರ್ವ: ಕ್ರೈಸ್ತ ಉದ್ಯಮಿ ಗ್ಯಾಬ್ರಿಯಲ್‌ ಫೇಬಿಯನ್‌ ನಜರತ್‌ ಶಿರ್ವ ಮುಖ್ಯರಸ್ತೆಯ ಅಟ್ಟಿಂಜ ಕ್ರಾಸ್‌ ಬಳಿ ಕಟ್ಟಿಸಿದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಜೋತಿಷ ವಿದ್ವಾನ್‌ ಉಡುಪಿ ಕನ್ನರ್ಪಾಡಿ ವೇ|ಮೂ|ಸಂದೀಪ್‌ ಉಪಾಧ್ಯಾಯ ಅವರ ನೇತೃತ್ವದಲ್ಲಿ ಋತ್ವಿಜರ ಸಹಕಾರದೊಂದಿಗೆ ದೃಢಕಲಶಾಭಿಷೇಕ ಮಂಗಳವಾರ ಸಂಪನ್ನಗೊಂಡಿತು.

Advertisement

ಶ್ರೀ ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಕಲಶಾಧಿವಾಸ ಹೋಮ,ಗಣಹೋಮ,ಗಣಪತಿ ಪ್ರಾಯಶ್ಚಿತ್ತ  ಶಾಂತಿ ಹೋಮ,ಪ್ರಾಯಶ್ಚಿತ್ತ ಹೋಮ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ 49 ದೃಢಕಲಶಾಭಿಷೇಕ ನಡೆಯಿತು.ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಿತು.

ಕಾರ್ಯಕ್ರಮಲ್ಲಿ ದೇವಸ್ಥಾನದ ಮೊಕ್ತೇಸರ ಗ್ಯಾಬ್ರಿಯಲ್‌ ನಜರತ್‌,ದೇವಸ್ಥಾನದ ವಾಸ್ತುಶಿಲ್ಪಿ ಎಂ. ಶ್ರೀನಾಗೇಶ್‌ ಹೆಗ್ಡೆ ದಂಪತಿ,ದೇವಸ್ಥಾನದ ನಿರ್ವಾಹಕರಾದ ಸತೀಶ್‌ ಶೆಟ್ಟಿ ಮಲ್ಲಾರ್‌ ಮತ್ತು ರತ್ನಾಕರ ಕುಕ್ಯಾನ್‌ ಮಾಜಿ ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ,ಹಿರಿಯರಾದ ತಮ್ಮಣ್ಣ ಪೂಜಾರಿ,ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ವಿಠಲ ಅಂಚನ್‌,ವಿವೇಕ್‌ ಆಚಾರ್ಯ ಶಿರ್ವ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾ.ಪಂ. ಸದಸ್ಯರು,ಭಕ್ತಾಧಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next