Advertisement

ಭೂ ಹಗರಣ ಪ್ರಕರಣ: ಸಂಜಯ್ ರಾವತ್ ಇ.ಡಿ ಕಸ್ಟಡಿ ಆಗಸ್ಟ್ 8ರವರೆಗೆ ವಿಸ್ತರಣೆ

02:44 PM Aug 04, 2022 | Team Udayavani |

ಮುಂಬೈ: ಪಟ್ರಾ ಚಾವ್ಲ್ ಭೂ ಪುನರ್ ಅಭಿವೃದ್ಧಿ ಪ್ರಕರಣ ಮತ್ತು ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಶಿವಸೇನಾ ಹಿರಿಯ ಮುಖಂಡ ಸಂಜಯ್ ರಾವತ್ ಬಂಧನದ ಅವಧಿಯನ್ನು ಆಗಸ್ಟ್ 8ರವರೆಗೆ ವಿಸ್ತರಿಸಿದೆ.

Advertisement

ಇದನ್ನೂ ಓದಿ:ಅಸ್ಸಾಂ ಜಿಹಾದಿ ಚಟುವಟಿಕೆಗಳ ಕೇಂದ್ರವಾಗುತ್ತಿದೆ: ಸಿಎಂ ಹಿಮಂತ ಬಿಸ್ವಾ ಶರ್ಮಾ

ಇಂದು ರಾವತ್ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ನಂತರ ಸಂಜಯ್ ರಾವತ್ ಅವರನ್ನು ಆಗಸ್ಟ್ 8ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿದೆ ಎಂದು ವರದಿ ತಿಳಿಸಿದೆ.

ಭೂ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ದುರುಪಯೋಗ ಆರೋಪದಡಿ ಸಂಜಯ್ ರಾವತ್ ಅವರನ್ನು ಜಾರಿ ನಿರ್ದೇಶನಾಲಯ ಭಾನುವಾರ ಮಧ್ಯರಾತ್ರಿ ಬಂಧಿಸಿತ್ತು. ಬಳಿಕ ಜಾರಿ ನಿರ್ದೇಶನಾಲಯ ಕೋರ್ಟ್ ಗೆ ಹಾಜರುಪಡಿಸಿ, ಎಂಟು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸುವಂತೆ ಕೋರಿತ್ತು. ಆದರೆ ನ್ಯಾಯಾಧೀಶರಾದ ಎಂಜಿ ದೇಶಪಾಂಡೆ, ಆಗಸ್ಟ್ 4ರವರೆಗೆ ರಾವತ್ ಅವರನ್ನು ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next