Advertisement

ಏರ್ ಇಂಡಿಯಾ ಸಿಬ್ಬಂದಿಗೆ ಒಂದಲ್ಲ, 25 ಬಾರಿ ಚಪ್ಪಲಿ ಏಟು ಕೊಟ್ಟ ಸಂಸದ!

04:05 PM Mar 23, 2017 | Sharanya Alva |

ನವದೆಹಲಿ/ಪುಣೆ: ಟಿಕೆಟ್ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕ್ಯಾತೆ ತೆಗೆದ ಶಿವಸೇನಾ ಸಂಸದ ರವೀಂದ್ರ ಗಾಯಕ್ವಾಡ್ ಗುರುವಾರ ಏರ್ ಇಂಡಿಯಾ ಸಂಸ್ಥೆಯ ಸಿಬ್ಬಂದಿಯೊಬ್ಬರಿಗೆ 25 ಬಾರಿ ಚಪ್ಪಲಿಯಿಂದ ಹೊಡೆದು ಗೂಂಡಾಗಿರಿ ಪ್ರದರ್ಶಿಸಿರುವ ಘಟನೆ ನಡೆದಿದೆ.

Advertisement

ಶಿವಸೇನಾ ಸಂಸದ ರವೀಂದ್ರ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬೇಕೆಂದು ಕೇಳಿದ್ದು, ಏರ್ ಇಂಡಿಯಾ ಎಕಾನಮಿ ಕ್ಲಾಸ್ ಟಿಕೆಟ್ ಅನ್ನು ಕೊಟ್ಟಿರುವುದಾಗಿ ಆರೋಪಿಸಿದ್ದಾರೆ. ಪುಣೆಯಿಂದ ನವದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಈ ಘಟನೆ ನಡೆದಿದೆ.

ನನ್ನ ಜೊತೆ ಅನುಚಿತವಾಗಿ ವರ್ತಿಸಿದ್ದಕ್ಕೆ ನಾನು ಏರ್ ಇಂಡಿಯಾ ಮ್ಯಾನೇಜರ್ ಗೆ 25 ಬಾರಿ ಚಪ್ಪಲಿಯಿಂದ ಹೊಡೆದಿದ್ದೇನೆ. ನಾನು ಈ ಬಗ್ಗೆ ಯಾವುದೇ ರೀತಿಯಲ್ಲೂ ಕ್ಷಮೆ ಕೇಳಲ್ಲ ಎಂದು ಹೇಳುವ ಮೂಲಕ ತನ್ನ ಕ್ರಮವನ್ನು ಸಮರ್ಥಿಸಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next