Advertisement

INDIA ಮೂರನೇ ಸಭೆಯನ್ನು ಆಯೋಜಿಸಲಿರುವ ಶಿವಸೇನೆ (UBT)

06:39 PM Aug 05, 2023 | Team Udayavani |

ಮುಂಬಯಿ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮುಂಬೈನಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ವಿರೋಧ ಪಕ್ಷದ INDIA ಮೂರನೇ ಸಭೆಯನ್ನು ಆಯೋಜಿಸಲಿದೆ ಎಂದು ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ರಾವುತ್ ಶನಿವಾರ ಹೇಳಿದ್ದಾರೆ.

Advertisement

ಸಭೆಯ ಸಂಬಂಧ ಮಹಾ ವಿಕಾಸ್ ಅಘಾಡಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್, ಆಗಸ್ಟ್ 31 ರಂದು ಐವರು ಮುಖ್ಯಮಂತ್ರಿಗಳು ಸೇರಿದಂತೆ ವಿಪಕ್ಷ ನಾಯಕರಿಗೆ ಠಾಕ್ರೆ ಭೋಜನ, ಆತಿಥ್ಯ ನೀಡಲಿದ್ದಾರೆ ಎಂದು ಹೇಳಿದರು.

ಉಪನಗರದ ಗ್ರ್ಯಾಂಡ್ ಹಯಾಟ್‌ ಹೋಟೆಲ್ ನಲ್ಲಿ ಎರಡು ದಿನಗಳ ಚರ್ಚೆಗಳು ಆಗಸ್ಟ್ 31 ರ ಸಂಜೆಯಿಂದ ಆರಂಭವಾಗಿ ಸೆಪ್ಟೆಂಬರ್ 1 ರಂದು ನಡೆಯಲಿದೆ. ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಯಲಿದೆ ಎಂದು ರಾವುತ್ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next