Advertisement

ಬಿಹಾರದಲ್ಲಿ ಆದಿತ್ಯ ಠಾಕ್ರೆ ; ನಿತೀಶ್ ಕುಮಾರ್, ತೇಜಸ್ವಿ ಮಹತ್ವದ ಭೇಟಿ

06:03 PM Nov 23, 2022 | Team Udayavani |

ಪಾಟ್ನಾ: ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಆದಿತ್ಯ ಠಾಕ್ರೆ ಅವರು ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಬುಧವಾರ ಅವರ ನಿವಾಸದಲ್ಲಿ ಭೇಟಿ ಮಾಡಿದರು.ಈ ವೇಳೆ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಹಾಜರಿದ್ದರು.

Advertisement

ಕಾನೂನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವುದು ಪ್ರಸ್ತುತ ಸವಾಲು ಮತ್ತು ಅದನ್ನು ಉಳಿಸಲು ನಾವು ಏನು ಬೇಕಾದರೂ ಮಾಡುತ್ತೇವೆ ಎಂದು ಆದಿತ್ಯ ಠಾಕ್ರೆ ಅವರನ್ನು ಭೇಟಿ ಮಾಡಿ ಮಾತು ಕತೆ ನಡೆಸಿದ ನಂತರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿಕೆ ನೀಡಿದ್ದಾರೆ.

ನಾವು ಪರಸ್ಪರ ಸಂಪರ್ಕದಲ್ಲಿದ್ದೇವೆ ಆದರೆ ಕೋವಿಡ್‌ನಿಂದಾಗಿ ಭೇಟಿಯಾಗಲು ಸಾಧ್ಯವಾಗಲಿಲ್ಲ. ನಾವು ವಿವಿಧ ವಿಷಯಗಳನ್ನು ಚರ್ಚಿಸಿದ್ದೇವೆ ಆದರೆ ರಾಜಕೀಯವನ್ನು ಚರ್ಚಿಸಲಿಲ್ಲ. ಈ ಸ್ನೇಹ ಮುಂದುವರಿಯುವುದು ಖಚಿತ ಎಂದು ಆದಿತ್ಯ ಠಾಕ್ರೆ ಹೇಳಿಕೆ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next