Advertisement

Kannada Cinema; ಶಿವಣ್ಣನ ಹೊಸ ಚಿತ್ರಕ್ಕೆ ಹೇಮಂತ್ ರಾವ್ ಸಾರಥಿ

05:50 PM Feb 03, 2024 | Team Udayavani |

ಕನ್ನಡದಲ್ಲಿ “ಗೋಧಿ ಬಣ್ಣ ಸಾಧಾರಣ ಮೈಕಟ್ಟು’, “ಕವಲುದಾರಿ’, “ಸಪ್ತ ಸಾಗರದಾಚೆ ಎಲ್ಲೋ..’ ದಂತಹ ಸದಭಿರುಚಿ ಸಿನಿಮಾಗಳನ್ನು ನಿರ್ದೇಶಿಸಿದ್ದ ಹೇಮಂತ್‌ ಎಂ. ರಾವ್‌ ಈಗ ಸದ್ದಿಲ್ಲದೆ ಹೊಸ ಸಿನಿಮಾಕ್ಕೆ ತಯಾರಿ ನಡೆಸಿದ್ದಾರೆ. ಈಗಾಗಲೇ ರಕ್ಷಿತ್‌ ಶೆಟ್ಟಿ, ರಿಷಿ ಮೊದಲಾದವರಿಗೆ ಆ್ಯಕ್ಷನ್‌-ಕಟ್‌ ಹೇಳಿದ್ದ ಹೇಮಂತ್‌ ಎಂ. ರಾವ್‌ ಈ ಬಾರಿ ನಟ ಶಿವರಾಜಕುಮಾರ್‌ ಅವರಿಗೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ.

Advertisement

ಕೆಲ ದಿನಗಳಿಂದ ನಿರ್ದೇಶಕ ಹೇಮಂತ್‌ ರಾವ್‌, ಶಿವರಾಜಕುಮಾರ್‌ ಅವರ ಹೊಸ ಸಿನಿಮಾಕ್ಕೆ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದರೂ, ಈ ಬಗ್ಗೆ ನಿರ್ದೇಶಕ ಹೇಮಂತ್‌ ರಾವ್‌ ಅವರಾಗಲಿ, ಚಿತ್ರತಂಡವಾಗಲಿ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಚಿತ್ರತಂಡದ ಕಡೆಯಿಂದಲೇ ಈ ಸಿನಿಮಾದ ಬಗ್ಗೆ ಅಧಿಕೃತ ಸುದ್ದಿ ಹೊರಬಿದ್ದಿದೆ.

ಈ ಬಗ್ಗೆ ಮಾತನಾಡುವ ನಿರ್ದೇಶಕ ಹೇಮಂತ್‌ ರಾವ್‌, “ಇದೊಂದು ಆ್ಯಕ್ಷನ್‌ ಡ್ರಾಮಾ ಕಥಾಹಂದರದ ಸಿನಿಮಾವಾಗಿದ್ದು, ಈಗಾಗಲೇ ಈ ಸಿನಿಮಾದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಅಂತಿಮ ಹಂತದಲ್ಲಿದೆ. ಸುಮಾರು ಆರು ತಿಂಗಳಿನಿಂದ ಈ ಸಿನಿಮಾದ ಕೆಲಸ ನಡೆಯುತ್ತಿದೆ. ಈ ವರ್ಷದ ಆಗಸ್ಟ್‌ ಅಥವಾ ಸೆಪ್ಟೆಂಬರ್‌ನಲ್ಲಿ ಸಿನಿಮಾ ಶೂಟಿಂಗ್‌ ಶುರು ಮಾಡುವ ಯೋಚನೆಯಿದೆ. ಮುಂದಿನ ವರ್ಷದ ಮಧ್ಯ ಭಾಗದಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ವೈಶಾಕ್‌ ಗೌಡ “ವೈಶಾಕ್‌ ಜೆ ಫಿಲಂಸ್‌’ ಬ್ಯಾನರ್‌ನಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಶೀಘ್ರದಲ್ಲಿಯೇ ಈ ಸಿನಿಮಾದ ಟೈಟಲ್‌, ಇತರ ಕಲಾವಿದರ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದೇವೆ’ ಎಂಬ ಮಾಹಿತಿ ನೀಡುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next