Advertisement

ಮಹಾರಾಷ್ಟ್ರದಲ್ಲಿ ಶಿವಸೇನೆ- ಕಾಂಗ್ರೆಸ್ ಸರಕಾರ; ಸುಳಿವು ನೀಡಿದ ರಾವತ್

09:39 AM Nov 11, 2019 | Team Udayavani |

ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು ರಾಜ್ಯಪಾಲರು ಬಿಜೆಪಿಯನ್ನು ಆಹ್ವಾನಿಸಿದ್ದಾರೆ. ಆದರೆ ಒಂದು ವೇಳೆ ಬಿಜೆಪಿ ಸರ್ಕಾರ ರಚಿಸಲು ವಿಫಲವಾದರೆ ನಾವು ಸರ್ಕಾರ ರಚಿಸುತ್ತೇವೆ ಎಂದು ಶಿವ ಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

Advertisement

ರಾಜ್ಯದಲ್ಲಿ ಕಾಂಗ್ರೆಸ್ ನಮ್ಮ ವಿರೋಧಿಯಲ್ಲ ಎಂದಿರುವ ಸಂಜಯ್ ರಾವತ್ ಕಾಂಗ್ರೆಸ್ – ಶಿವಸೇನೆ ಸರ್ಕಾರ ರಚನೆಯ ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ಉಂಟಾಗಿರುವ ಅನಿಶ್ಚಿತತೆಯನ್ನು ಕೊನೆಗೊಳಿಸಲು ಬಿಜೆಪಿ ಯಾವುದೇ ಪ್ರಯತ್ನ ನಡೆಸಿಲ್ಲ. ಒಂದು ವೇಳೆ ಬಿಜೆಪಿ ಸರ್ಕಾರ ರಚನೆಗೊಳಿಸಲು ವಿಫಲರಾದರೆ, ಶಿವ ಸೇನೆ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ರಾವತ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next