Advertisement

ಶಿವಕುಮಾರ್‌ ಎಲ್ಲಿದ್ದೀಯಪ್ಪಾ; ಶ್ರೀರಾಮುಲು ಸರಣಿ ಟ್ವೀಟ್‌

06:47 AM Jun 24, 2019 | Team Udayavani |

ಬಳ್ಳಾರಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರು ಜಲಸಂಪನ್ಮೂಲ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ ವಿರುದ್ಧ ಟ್ವೀಟ್‌ ಟೀಕೆ ಆರಂಭಿಸಿದ್ದಾರೆ.

Advertisement

ಶನಿವಾರವಷ್ಟೇ ಡಿ.ಕೆ.ಶಿವಕುಮಾರ್‌ ಅವರನ್ನು ಶಕುನಿಗೆ ಹೋಲಿಸಿದ್ದ ಶ್ರೀರಾಮುಲು, ಭಾನುವಾರ ಟ್ವೀಟ್‌ ಮಾಡುವ ಮೂಲಕ ವಾಗ್ಧಾಳಿ ಮುಂದುವರಿಸಿದ್ದಾರೆ. ಸರಣಿ ಟ್ವೀಟ್‌ ಮಾಡುವ ಮೂಲಕ ಸಚಿವ ಡಿ.ಕೆ.ಶಿ ಅವರು ಹೇಳಿದ್ದ ಹಳೇ ಹೇಳಿಕೆಗಳಿಗೂ ತಿರುಗೇಟು ನೀಡಿದ್ದಾರೆ.

ಟ್ವೀಟ್‌ 1: ಶಿವಕುಮಾರ ಅಣ್ಣನವರೇ, ನಾನು ಬಳ್ಳಾರಿಯ ಮಣ್ಣಿನ ಮಗ. ಚುನಾವಣೆ ಸಂದರ್ಭದಲ್ಲಿ ಮಾತ್ರ ಬಂದು ಹೋಗುವ ನಿಮ್ಮನ್ನು ಜನ ಶಿವಕುಮಾರ ಎಲ್ಲಿದ್ದೀಯಪ್ಪ ಎನ್ನುತ್ತಿದ್ದಾರೆ. ವಲಸೆ ಬಂದವರಿಗೆ ಬಳ್ಳಾರಿಯ ಜನ ತಮ್ಮ ಸ್ವಾಭಿಮಾನದಿಂದ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರಿಸಿದ್ದಾರೆ.

ಟ್ವೀಟ್‌ 2: ಕುಮಾರಸ್ವಾಮಿಯವರ ಮೇಲಿನ ನಿಮ್ಮ ಕುರುಡು ಪ್ರೇಮಕ್ಕಾಗಿ ರಾಜ್ಯದಲ್ಲಿ ಕಾಂಗ್ರೆಸ್‌ನ್ನು ಒಂದಂಕಿಗೆ ಇಳಿಸಿದ ಕೀರ್ತಿ ನಿಮಗೆ ಸಲ್ಲಬೇಕು. ಬಳ್ಳಾರಿಯ ಜನರ ಪ್ರೀತಿಯ ಬಗ್ಗೆ ಮಾತನಾಡುವ ನೀವು, ಬಳ್ಳಾರಿ ಜಿಲ್ಲೆಯ ಮಂತ್ರಿಗಳಲ್ಲಿಯೇ ಯಾರನ್ನಾದರೂ ಬಳ್ಳಾರಿ ಉಸ್ತುವಾರಿ ಸಚಿವರನ್ನಾಗಿ ಮಾಡಿ.

ಟ್ವೀಟ್‌ 3: ಶುಭ ಮುಹೂರ್ತ, ಶುಭ ಘಳಿಗೆಯಲ್ಲಾದರೂ ಇನ್ಮುಂದೆ ಕೇವಲ ಚುನಾವಣಾ ಸಚಿವರಾಗದೆ ಬಳ್ಳಾರಿ ಅಭಿವೃದ್ಧಿಗೆ ಶ್ರಮಿಸಿ ಎಂದು ನಿಮ್ಮಲ್ಲಿ ಕಳಕಳಿಯ ಮನವಿ ಮಾಡುತ್ತೇನೆ ಅಣ್ಣ.

Advertisement
Advertisement

Udayavani is now on Telegram. Click here to join our channel and stay updated with the latest news.

Next