Advertisement

ಇಂದು ಶಿವಲಿಂಗೇಗೌಡ, ಎನ್‌.ವೈ.ಗೋಪಾಲಕೃಷ್ಣ ಕಾಂಗ್ರೆಸ್‌ಗೆ

09:34 PM Apr 02, 2023 | Team Udayavani |

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜೆಡಿಎಸ್‌ನ ಶಿವಲಿಂಗೇಗೌಡ ಹಾಗೂ ಬಿಜೆಪಿಯ ಎನ್‌.ವೈ.ಗೋಪಾಲಕೃಷ್ಣ ಸೋಮವಾರ ಕಾಂಗ್ರೆಸ್‌ ಸೇರಲಿದ್ದಾರೆ.

Advertisement

ಎನ್‌.ವೈ.ಗೋಪಾಲಕೃಷ್ಣ ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಭಾನುವಾರ ಶಿವಲಿಂಗೇಗೌಡರು ರಾಜೀನಾಮೆ ನೀಡಿದ್ದಾರೆ. ಇಬ್ಬರೂ ಸೋಮವಾರ ಮಧ್ಯಾಹ್ನ ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಉಸ್ತುವಾರಿ ಸುರ್ಜೇವಾಲ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲಿ ಬೆಂಬಲಿಗರ ಸಹಿತ ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಹೇಳಲಾಗಿದೆ.

ಮಂಗಳವಾರ ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಎರಡನೇ ಹಂತದ ಪಟ್ಟಿ ಅಂತಿಮಗೊಳ್ಳಲಿದೆ. ಎರಡನೇ ಪಟ್ಟಿಯಲ್ಲಿ ಶಿವಲಿಂಗೇಗೌಡ ಹಾಗೂ ಎನ್‌.ವೈ.ಗೋಪಾಲಕೃಷ್ಣ, ಇತ್ತೀಚೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿರುವ ಜೆಡಿಎಸ್‌ ಗುಬ್ಬಿ ಶ್ರೀನಿವಾಸ್‌ ಅವರ ಹೆಸರು ಇರಲಿದೆ ಎಂದು ಹೆಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next