Advertisement

ಬಡವರಿಗೆ ಆಹಾರ ಕಿಟ್‌ ವಿತರಿಸಲು ಮನವಿ

09:46 PM Jun 01, 2021 | Shreeraj Acharya |

ಶಿವಮೊಗ್ಗ: ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೂಡಲೇ ಬಡವರಿಗೆ ಆಹಾರದ ಕಿಟ್‌ ವಿತರಿಸಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿ ಮೇಯರ್‌ ಅವರಿಗೆ ಮನವಿ ಸಲ್ಲಿಸಿದರು.

Advertisement

ಮೇ 21 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕೊರೊನಾ ನಿರ್ವಹಣಾ ಸಭೆಯಲ್ಲಿ ತೀರ್ಮಾನಿಸಿದಂತೆ ನಗರದ ಎಲ್ಲಾ ಬಡ ಕುಟುಂಬಗಳಿಗೆ ಆಹಾರದ ಕಿಟ್‌ ವಿತರಿಸಬೇಕು. ತೀರ್ಮಾನವಾಗಿ 10 ದಿನ ಕಳೆದರೂ ಪಾಲಿಕೆ ವತಿಯಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈಗ ಮತ್ತೆ ಇಂದಿನಿಂದ ಕಠಿಣ ಲಾಕ್‌ ಡೌನ್‌ ವಿ ಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಡವರು, ಶ್ರಮಿಕರು ದುಡಿಮೆಯಿಲ್ಲದೆ ಕಂಗೆಟ್ಟಿದ್ದಾರೆ. ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಪಾಲಿಕೆ ಬಜೆಟ್‌ ನಲ್ಲಿ ಕೊರೊನಾ ನಿರ್ವಹಣೆಗೆ ಮೀಸಲಿಟ್ಟಿರುವ ನಿಧಿಯಲ್ಲಿ ಆದಷ್ಟು ಬೇಗ ನಗರದ ಬಡ ಕುಟುಂಬಗಳಿಗೆ ತುರ್ತಾಗಿ ಆಹಾರದ ಕಿಟ್‌ ವಿತರಿಸಬೇಕು ಎಂದು ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಪಾಲಿಕೆ ಕಾಂಗ್ರೆಸ್‌ ಸದಸ್ಯರಾದ ಎಚ್‌.ಸಿ. ಯೋಗೀಶ್‌, ರೇಖಾ ರಂಗನಾಥ್‌, ಮೆಹಕ್‌ ಷರೀಫ್‌, ಬಿ.ಎ. ರಮೇಶ್‌ ಹೆಗ್ಡೆ, ಆರ್‌.ಸಿ. ನಾಯಕ್‌, ಮುಖಂಡರಾದ ಕೆ. ರಂಗನಾಥ್‌, ರಂಗೇಗೌಡ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next