Advertisement

ಜಿಲ್ಲಾದ್ಯಂತ ನಾಡಪ್ರಭುಗೆ ನಮನ

11:02 PM Jun 28, 2021 | Shreeraj Acharya |

ಶಿವಮೊಗ್ಗ: ಜಿಲ್ಲಾದ್ಯಂತ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಡಳಿತ ಸೇರಿ ವಿವಿಧ ಸಂಘಟನೆಗಳು ಜಯಂತಿ ಆಚರಿಸಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದವು.

Advertisement

ಜಿಲ್ಲಾಡಳಿತದಿಂದ ಕುವೆಂಪು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್‌. ಈಶ್ವರಪ್ಪ ಭಾಗವಹಿಸಿ ಪುಷ್ಪನಮನ ಸಲ್ಲಿಸಿ ಕೆಂಪೇಗೌಡರ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದರು.

ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎನ್‌.ಎಚ್‌. ಶ್ರೀಕಾಂತ್‌, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌, ಆದಿಮೂರ್ತಿ, ಆಶಿತ್‌, ಕಡಿದಾಳ್‌ ಗೋಪಾಲ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್‌, ಇತರ ಪದಾಧಿಕಾರಿಗಳು ಇದ್ದರು.

ನಂತರ ಜಿಲ್ಲಾ ಒಕ್ಕಲಿಗರ ಭವನದಲ್ಲಿ ಸಮಾಜದವರಿಗೆ ಕೋವಿಡ್‌ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಚಿವ ಕೆ.ಎಸ್‌. ಈಶ್ವರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎನ್‌.ಎಚ್‌. ಶ್ರೀಕಾಂತ್‌, ಡಾ| ಶಾಂತಾ ಸುರೇಂದ್ರ, ಪ್ರೊ| ಪದ್ಮನಾಭ, ಗೋ. ರಮೇಶ್‌ ಗೌಡ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next