Advertisement

ಕಾಮಗಾರಿ ತ್ವರಿತಕ್ಕೆ ಅಧಿಕಾರಿಗಳಿಗೆ ಸೂಚನೆ

06:58 PM Jan 29, 2021 | Shreeraj Acharya |

ಶಿವಮೊಗ್ಗ: ಮಲೆನಾಡು ಅಭಿವೃದ್ಧಿ ಪ್ರಾ ಧಿಕಾರದ ವತಿಯಿಂದ ಹಾವೇರಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ನಿಗ ದಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಪ್ರಾ ಧಿಕಾರದ ಅಧ್ಯಕ್ಷ ಕೆ.ಎಸ್‌. ಗುರುಮೂರ್ತಿ ಅವರು ಆಯಾ ಜಿಲ್ಲೆಗಳ ಅ ಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಚೇರಿ ಸಭಾಂಗಣದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿ ಕಾರದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕೈಗೊಂಡ ಕುರಿತು ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ಕಾರ್ಯಕ್ರಮ ಅನುಷ್ಠಾನಾ ಧಿಕಾರಿಗಳು ಕಾರ್ಯಕ್ಷೇತ್ರದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪೂರ್ಣವಾಗದಿರುವ 35 ಕಾಮಗಾರಿಗಳನ್ನು ಈ ಮಾಸಾಂತ್ಯದೊಳಗೆ ಪೂರ್ಣ ಗೊಳಿಸಲು ಹಾಗೂ ಪ್ರಸ್ತುತ ಅನುಮೋದನೆಗೆ ಸಲ್ಲಿಸುತ್ತಿರುವ 48 ಕಾಮಗಾರಿಗಳನ್ನು ಮಾರ್ಚ್‌ 2ನೇ ವಾರದೊಳಗಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು. ಒಟ್ಟಾರೆ 83 ಕಾಮಗಾರಿಗಳ ಬಾಕಿ ಉಳಿದ 7.93 ಕೋಟಿ ರೂ. ಗಳನ್ನು ಯಾವುದೇ ಕಾರಣಕ್ಕೂ ಹಿಂದಕ್ಕೆ ಹೋಗದಂತೆ ಸಕಾಲದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದರು. ಮಂಡಳಿಯ ಕಾರ್ಯದರ್ಶಿ ಕೆ.ಎಸ್‌. ಮಣಿ, ಪಂಚಾಯತ್‌ ಇಂಜಿನಿಯರಿಂಗ್‌ ವಿಭಾಗ ಮತ್ತಿತರ ಅಧಿಕಾರಿಗಳು ಇದ್ದರು.

ಓದಿ : ಜುಲೈ 16ರಂದು ವಿಶ್ವದಾದ್ಯಂತ  ತೆರೆಗೆ ಅಪ್ಪಳಿಸಲಿದೆ ಕೆ.ಜಿ.ಎಫ್ -2

Advertisement

Udayavani is now on Telegram. Click here to join our channel and stay updated with the latest news.

Next