Advertisement

ಸಿಎಂ ನಿವಾಸಕ್ಕೆ ರಂಭಾಪುರಿ ಶ್ರೀ ಭೇಟಿ

10:22 PM Jul 09, 2021 | Shreeraj Acharya |

ಶಿಕಾರಿಪುರ: ಪಟ್ಟಣದ ಮಾಳೇರಕೇರಿಯಲ್ಲಿ ಇರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನಿವಾಸಕ್ಕೆ ಗುರುವಾರ ರಂಭಾಪುರಿ ಡಾ| ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಭೇಟಿ ನೀಡಿದರು.

Advertisement

ಈ ವೇಳೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರರಾದ ಸಂಸದ ಬಿ.ವೈ. ರಾಘವೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ದಂಪತಿ ಕುಟುಂಬ ಸಮೇತರಾಗಿ ಶ್ರೀಗಳ ಪಾದಪೂಜೆ ನೆರವೇರಿಸಿದರು.

ತಾಲೂಕಿನ ಕಡೇನಂದಿಹಳ್ಳಿಯ ರೇವಣಸಿದ್ದ ಪುಣ್ಯಾಶ್ರಮದಲ್ಲಿ ನಡೆಯುತ್ತಿರುವ ಜಗದ್ಗುರು ರೇಣುಕಾಚಾರ್ಯ ಶಿಲಾ ಮಂದಿರದ ಕಾರ್ಯಕ್ರಮಕ್ಕೆ ಭಾಗವಹಿಸಲು ಆಗಮಿಸಿದ್ದ ಶ್ರೀಗಳು ಸಂಸದ ಬಿ.ವೈ. ರಾಘವೇಂದ್ರ ಅವರ ಆಹ್ವಾನದ ಮೇರೆಗೆ ಆಗಮಿಸಿ ಕುಟುಂಬದವರಿಗೆ ಆಶೀರ್ವದಿಸಿದರು.

ಮಲೆನಾಡು ಅಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಕೆ.ಎಸ್‌. ಗುರುಮೂರ್ತಿ, ಅವರ ಕುಟುಂಬದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next