Advertisement

ಕೋವಿಡ್‌ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ

10:20 PM Jul 11, 2021 | Shreeraj Acharya |

ಸಾಗರ: ತಾಲೂಕಿನಲ್ಲಿ ಕೋವಿಡ್‌ ನಿಂದ ಮೃತಪಟ್ಟವರ ಅವಲಂಬಿತ ಕುಟುಂಬಗಳಿಗೆ ಸುಪ್ರೀಂ ಕೋರ್ಟ್‌ ಸೂಚಿಸಿರುವ ಪರಿಹಾರ ದೊರೆಯುವ ತನಕ ಹೋರಾಟದಿಂದ ವಿಶ್ರಮಿಸುವುದಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.

Advertisement

ತಾಲೂಕಿನ ಜೋಗ್‌- ಕಾರ್ಗಲ್‌ ಪಪಂ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬಗಳ ಅವಲಂಬಿತರಿಗೆ ಆಹಾರ ಕಿಟ್‌ ವಿತರಿಸಿ ಮಾತನಾಡಿದ ಅವರು, ಕೆಪಿಸಿಸಿ ಆದೇಶದಂತೆ ಕೋವಿಡ್‌ನಿಂದ ಮೃತಪಟ್ಟವರ ಮತ್ತು ಅವಲಂಬಿತರ ಸಮಗ್ರ ಮಾಹಿತಿಯನ್ನು ಸಂಗ್ರಹಿಸುತ್ತಿದೆ. ಪರಿಹಾರ ಪಡೆಯುವಲ್ಲಿ ಬೇಕಾಗುವ ಮಾರ್ಗದರ್ಶನವನ್ನು ವಾರ್ಡ್‌ ವಾರಿಯರ್ಸ್‌ ಮೂಲಕ ನೊಂದವರಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕೆಪಿಸಿಸಿ ಕಾರ್ಯದರ್ಶಿ ಡಾ| ರಾಜನಂದಿನಿ ಮಾತನಾಡಿ, ಡಿ.ಕೆ.ಶಿವಕುಮಾರ್‌ ಅವರು ನಿತ್ಯ ತಾಲೂಕುವಾರು, ಜಿಲ್ಲಾವಾರು ಕೋವಿಡ್‌ ಪೀಡಿತರ ಮತ್ತು ಮೃತಪಟ್ಟ ಸೋಂಕಿತರ ಬಗ್ಗೆ ವರದಿಯನ್ನು ಕೇಳಿ ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ತಾಲೂಕಿನ ನಗರ ಪಾಲಿಕೆ, ಪಪಂ ಮತ್ತು 35 ಗ್ರಾಪಂಗಳಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಆರ್‌.ಜಯಂತ್‌, ಕಾರ್ಗಲ್‌ ಪಪಂ ವ್ಯಾಪ್ತಿಯ ಕಾಂಗ್ರೆಸ್‌ ಪ್ರಮುಖರು, ಪಂಚಾಯ್ತಿ ಸದಸ್ಯರು, ವಾರ್ಡ್‌ ವಾರಿಯರ್ಸ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next