Advertisement

ಶಿವಮೊಗ್ಗ: ಮರ ಬಿದ್ದು ಸಿಗಂದೂರು ರಸ್ತೆಯಲ್ಲಿ ಕೆಲ ಹೊತ್ತು ಸಂಚಾರ ಸ್ಥಗಿತ

04:48 PM Jul 13, 2022 | Team Udayavani |

ಶಿವಮೊಗ್ಗ: ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ಬುಧವಾರ ಸಿಗಂದೂರು ರಸ್ತೆಯಲ್ಲಿ ಕೆಲ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿತ್ತು.

Advertisement

ಸಾಗರ ಸಿಗಂದೂರು ರಸ್ತೆಯ ಅಂಬಾರಗೋಡ್ಲು ಬಳಿ ರಸ್ತೆಗೆ ಅಡ್ಡಲಾಗಿ ಮರ ಬಿದಿದ್ದರಿಂದ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು.

ರಸ್ತೆಯಲ್ಲಿ ಮರ ಬಿದ್ದಿದ್ದರಿಂದ ಸಿಗಂದೂರು ಪ್ರವಾಸಿಗರಿಗೆ ಸಮಸ್ಯೆ ಉಂಟಾಯಿತು. ಸಿಗಂದೂರಿಗೆ ತೆರಳುವವರು ಮತ್ತು ದೇವರ ದರ್ಶನ ಪಡೆದು ಸಾಗರದ ಕಡೆಗೆ ಮರಳುತ್ತಿದ್ದವರಿಗೆ ರಸ್ತೆಯಲ್ಲಿ ಗಂಟೆಗಳ ಕಾಲ ನಿಲ್ಲಬೇಕಾಯಿತು.

ಮರ ಬಿದ್ದಿದ್ದರಿಂದ ಸುಮಾರು ಒಂದು ಗಂಟೆ ವಾಹನ ಸಂಚಾರ ಸ್ಥಗಿತವಾಗಿತ್ತು. ಮೆಸ್ಕಾಂ ಅಧಿಕಾರಿಗಳು, ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next