Advertisement

Shivamogga; ಬಿ.ವೈ.ರಾಘವೇಂದ್ರ ಭರ್ಜರಿ ಮುನ್ನಡೆ: ಸಂಭ್ರಮಾಚರಣೆ ಆರಂಭ

11:59 AM Jun 04, 2024 | Team Udayavani |

ಶಿವಮೊಗ್ಗ : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುವುದು ಬಹುತೇಕ ಸ್ಪಷ್ಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಸಂಭ್ರಮಾಚರಣೆ ಆರಂಭಿಸಿದ್ದಾರೆ.

Advertisement

13 ನೇ ಸುತ್ತಿನ ಮತ ಎಣಿಕೆ ಬಳಿಕ ರಾಘವೇಂದ್ರ 1,05,927 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಿ.ವೈ ರಾಘವೇಂದ್ರ – 354207, ಕಾಂಗ್ರೆಸ್ ನ ಗೀತಾ ಶಿವರಾಜ್ ಕುಮಾರ್ – 242280 ಮತಗಳು ಮತ್ತು ಪಕ್ಷೇತರ (ಬಿಜೆಪಿ ಬಂಡಾಯ) ಅಭ್ಯರ್ಥಿಯಾಗಿರುವ ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ 14,414 ಮತಗಳನ್ನು ಪಡೆದಿದ್ದಾರೆ.

ಚಾಮರಾಜನಗರ, ದಾವಣಗೆರೆ, ಕಲಬುರಗಿ , ಬೀದರ್ , ಹಾಸನ, ಚಿಕ್ಕೋಡಿ, ಕೊಪ್ಪಳ ಮತ್ತು ಬೆಂಗಳೂರು ಸೆಂಟ್ರಲ್ ನಲ್ಲಿ ಮುನ್ನಡೆ ಕಾಯ್ದು ಕೊಂಡಿದೆ

ಬೆಂಗಳೂರು ದಕ್ಷಿಣ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ, ಮಂಗಳೂರು, ಚಿತ್ರದುರ್ಗ ದಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದೆ. ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಜಿದ್ದಾ ಜಿದ್ದಿನ ಸ್ಪರ್ಧೆ ಕಂಡು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next