Advertisement

Shivamogga: ಭದ್ರಾವತಿ ಶಾಸಕ ಸಂಗಮೇಶ್ ಪುತ್ರನ ಹತ್ಯೆಗೆ ಜೈಲಿನಿಂದಲೇ ಸ್ಕೆಚ್…

01:52 PM Aug 22, 2024 | Kavyashree |

ಶಿವಮೊಗ್ಗ: ಭದ್ರಾವತಿ ಶಾಸಕ ಸಂಗಮೇಶ್ ಪುತ್ರ ಬಸವೇಶ್ ಹತ್ಯೆಗೆ ಜೈಲಿನಿಂದಲೇ ಸ್ಕೆಚ್ ಹಾಕಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಸಂಬಂಧ ಭದ್ರಾವತಿ ಓಲ್ಡ್  ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಡಿಚ್ಚಿ ಮುಬಾರಕ್ ಹಾಗೂ ಭದ್ರಾವತಿಯ ಟಿಪ್ಪು ಆಂಡ್‌ ಟೀಂನೊಂದಿಗೆ ಸೇರಿಕೊಂಡು ಬಸವನ ವಿರುದ್ಧ ಕೊಲೆ ಸ್ಕೆಚ್‌ ರೂಪಿಸಿದ್ದರ ಬಗ್ಗೆ ಆರೋಪ ಮಾಡಲಾಗಿದೆ.

ಎಫ್.ಐ.ಆರ್. ನಲ್ಲಿ ಏನಿದೆ?

ಭದ್ರಾವತಿ ನಗರದ ಜಟ್ ಪಟ್ ನಗರದ ನಿವಾಸಿಯಾದ ಮುಬಾರಕ್ ಮುಬ್ಬು ಕಳೆದ ಆ.17 ರಂದು ಒಬ್ಬ ವ್ಯಕ್ತಿಯ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್‌ ಜೈಲಿನಿಂದ  ಎರಡು ಪ್ರತ್ಯೇಕ ಫೋನ್‌ ನಂಬರ್‌ನಿಂದ ಕರೆ ಮಾಡಿ, ಬಸವರನ್ನು ಮುಗಿಸುವ ಡೀಲ್‌ ನಡೆದಿರುವ ಬಗ್ಗೆ ಹೇಳಿದ್ದಾನೆ. ಇದನ್ನು ಕೇಳಿಸಿಕೊಂಡ ವ್ಯಕ್ತಿಯು ಪೊಲೀಸರಿಗೆ ದೂರು ನೀಡಿದ್ದಾರೆ.

ಮುಬ್ಬು ಹೇಳಿದಂತೆ ಜೈಲಿನಿಂದಲೇ ಡಿಚ್ಚಿ ಮುಬಾರಕ್‌ ಬಸವನ ಹತ್ಯೆಗೆ ಸ್ಕೆಚ್‌ ಹಾಕಿ ಸೀಗೆಬಾಗಿ ನಿವಾಸಿ ಟಿಪ್ಪುಗೆ ಡೀಲ್‌ ಕೊಟ್ಟಿದ್ದಾನೆ. ಗಾಂಧಿ ಸರ್ಕಲ್‌ನಲ್ಲಿ ಬಸವನನ್ನು ಹೊಡೆದು ಹಾಕಿ ಎಂದು ಟಿಪ್ಪು ಆಂಡ್‌ ಟೀಂಗೆ ಹೇಳಿದ್ದ ಎಂದು ಮುಬ್ಬು ತಿಳಿಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.

Advertisement

ಇಷ್ಟೇ ಅಲ್ಲದೆ  ಆ.17 ರಂದು ರಂಗಪ್ಪ ಸರ್ಕಲ್‌ ಬಳಿ ಸಿಕ್ಕ ಟಿಪ್ಪು ಬಾರ್‌ವೊಂದರಲ್ಲಿ ಕುಳಿತು ಡಿಚ್ಚಿ ಮುಬಾರಕ್‌ ಡೀಲ್‌ ಕೊಟ್ಟಿದ್ದು, ಅದರಂತೆ ಚಾಕು ತಂದಿದ್ದೇನೆ ಎಂದು ಮುಬ್ಬುಗೆ ತೋರಿಸಿರುವ ಬಗ್ಗೆ ಎಫ್‌ಐಆರ್‌ ನಲ್ಲಿ ಉಲ್ಲೇಖಿಸಲಾಗಿದೆ.

ಸಂಗಮೇಶ್ ಆಪ್ತರೊಬ್ಬರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next