Advertisement

ಭಾರತ್‌ ಬಂದ್‌ಗೆ ನೀರಸ ಪ್ರತಿಕ್ರಿಯೆ

12:56 PM Jan 09, 2020 | Naveen |

ಶಿವಮೊಗ್ಗ: ರೈತ ಸಂಘಟನೆ, ಸಿಟಿಯು ಹಾಗೂ ಜೆಟಿಐಯು ಸಂಘಟನೆಗಳು ಕೇಂದ್ರ ಸರ್ಕಾರದ ವೈಫಲ್ಯದ ವಿರುದ್ಧ ಕರೆ ನೀಡಿದ ಭಾರತ್‌ ಬಂದ್‌ಗೆ ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

Advertisement

ಎಂದಿನಂತೆ ಆಟೋ ಸಂಚಾರ ಇದ್ದು, ಹೊಟೇಲ್‌, ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಗಳು ಸಂಚಾರವೂ ಎಂದಿನಂತೆ ಸಾಮಾನ್ಯವಾಗಿ ಮುಂದುವರಿದಿತ್ತು. ಬಂದ್‌ಗೆ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿದ್ದರೂ ಸರ್ಕಾರದ ಖಡಕ್‌ ಎಚ್ಚರಿಕೆ ಹಿನ್ನೆಲೆಯಲ್ಲಿ ತಮ್ಮ ಕೆಲಸದಲ್ಲಿ ತೊಡಗಿಕೊಂಡಿರುವುದು ಕಂಡುಬಂದಿತು. ಎಂದಿನಂತೆ ಶಾಲಾ- ಕಾಲೇಜಿಗೆ ಮಕ್ಕಳು ಹೋಗುತ್ತಿದ್ದ ದೃಶ್ಯಗಳು ಕಂಡುಬಂದವು.

ದೈನಂದಿನ ಕಾರ್ಯದಲ್ಲಿ ಜನ ತೊಡಗಿಸಿಕೊಂಡಿದ್ದು ನಗರದಲ್ಲಿ ಬಂದ್‌ನ ಯಾವ ಲಕ್ಷಣವೂ ಗೋಚರಿಸಲಿಲ್ಲ. ತಾಲೂಕುಗಳಲ್ಲೂ ಪರಿಸ್ಥಿತಿ ಯಥಾರೀತಿ ಇತ್ತು. ಮುಷ್ಕರಕ್ಕೆ ಕರೆ ನೀಡಿದ್ದ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದವು.

Advertisement

Udayavani is now on Telegram. Click here to join our channel and stay updated with the latest news.

Next