Advertisement

ಶಿವಮೊಗ್ಗ: ಯುವಕನ ಹತ್ಯೆಗೆ ಸಂಚು ರೂಪಿಸಿದ್ದ 13 ಮಂದಿ ವಿರುದ್ಧ ಪ್ರಕರಣ

06:41 PM Apr 15, 2022 | Team Udayavani |

ಶಿವಮೊಗ್ಗ:  ಮುಸ್ಲಿಂ ಯುವಕನ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ 13 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದ ಬಳಿಕ ಉಂಟಾಗಿದ್ದ ಗಲಭೆ ಸಂಬಂಧ ಯುವಕನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಆತ ಸ್ಪೋಟಕ ಮಾಹಿತಿ ಬಾಯಿ ಬಿಟ್ಟಿದ್ದಾನೆ.

Advertisement

13 ಮಂದಿ ವಿರುದ್ಧ ಕೇಸ್

ರಾಖಿ ಎಂಬಾತನ ವಿಚಾರಣೆ ವೇಳೆ ಮುಸ್ಲಿಂ ಯುವಕನ ಹತ್ಯೆಗೆ ಸಂಚು ಕುರಿತು ಬಾಯಿ ಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ರಾಖಿ ಸೇರಿದಂತೆ ಶಿವಮೊಗ್ಗದ 13 ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಖಿ ಸಿಕ್ಕಿಬಿದ್ದಿದ್ದು ಹೇಗೆ?

ಫೆ.21ರಂದು ಬೆಳಗ್ಗೆ 11.30ಕ್ಕೆ ಸೀಗೆಹಟ್ಟಿಯಲ್ಲಿ ಪತ್ರಕರ್ತ ಮೊಹಮದ್ ರಫಿ ಅವರ ಮೇಲೆ ಗುಂಪು ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ರಾಖಿ ಎಂಬಾತನ ವಿಚಾರಣೆ ನಡೆಸಲಾಗುತ್ತಿತ್ತು. ಆಗ ಮುಸ್ಲಿಂ ಯುವಕನ ಹತ್ಯೆಗೆ ಸಂಚು ರೂಪಿಸಿರುವುದಾಗಿ ಹೇಳಿಕೆ ನೀಡಿದ್ದಾನೆ ಎಂದು ಎಫ್ಐಆರ್ ದಾಖಲು ಮಾಡಲಾಗಿದೆ.

Advertisement

ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next