Advertisement

ಶಿವಮೊಗ್ಗ : ಯುವಕನ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ, ಸ್ಥಳದಲ್ಲಿ ಬಿಗುವಿನ ವಾತಾವರಣ

07:42 AM Oct 25, 2022 | Team Udayavani |

ಶಿವಮೊಗ್ಗ : ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

Advertisement

ಪ್ರಕಾಶ್ (25) ಎಂಬಾತನ ಮೇಲೆ ದಾಳಿ ನಡೆಸಲಾಗಿದೆ. ಭರ್ಮಪ್ಪನಗರದ 2ನೇ ಅಡ್ಡರಸ್ತೆಯಲ್ಲಿ ರಾತ್ರಿ ಘಟನೆ ಸಂಭವಿಸಿದೆ.

ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಯುವಕನ ಮೇಲೆ ಕಲ್ಲು ತೂರಾಟ ಮಾಡಿದ್ದು, ತಲೆಗೆ ಗಾಯವಾಗಿದೆ. ಕೂಡಲೇ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ವಿಚಾರ ತಿಳಿಯುತ್ತಿದ್ದಂತೆ ಜನ ಗುಂಪು ಸೇರಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಆಸ್ಪತ್ರೆಗೆ ದಾಖಲು, ಚಿಕಿತ್ಸೆ

ತಲೆಗೆ ಕಲ್ಲು ಬಿದ್ದು ಗಾಯಗೊಂಡಿದ್ದ ಪ್ರಕಾಶ್‌ನನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ತಲೆಗೆ ಹೊಲಿಗೆ ಹಾಕಲಾಗಿದೆ. ಸದ್ಯ ಪ್ರಕಾಶ್‌ಗೆ ಯಾವುದೆ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

Advertisement

ಗುಂಪು ಸೇರಿದ ಜನ, ಬಿಗುವಿನ ವಾತಾವರಣ

ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಸೀಗೆಹಟ್ಟಿ ಸೇರಿದಂತೆ ವಿವಿಧಡೆ ಸಂಚರಿಸಿದ್ದಾರೆ. ಅವಾಚ್ಯ ಶಬ್ದಗಳನ್ನು ಬಳಸಿ ಕೂಗಾಡುತ್ತಾ ಸಾಗಿದ್ದಾರೆ. ವಿಚಾರ ತಿಳಿದು ಸೀಗೆಹಟ್ಟಿ ಭಾಗದಲ್ಲಿ ಜನ ಗುಂಪು ಸೇರಿದ್ದಾರೆ. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next