Advertisement

ಹರ್ಷನ ಮನೆ ಬಳಿ ಲಾಂಗು ಮಚ್ಚು ಹಿಡಿದು ಪುಂಡಾಟ ಮೆರೆದ ದುಷ್ಕರ್ಮಿಗಳು: ಸ್ಥಳೀಯರು ಹೇಳಿದ್ದೇನು

08:40 AM Oct 25, 2022 | Team Udayavani |

ಶಿವಮೊಗ್ಗ : ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಹರ್ಷನ ಮನೆಯ ಬಳಿಯೇ ದುಷ್ಕರ್ಮಿಗಳ ತಂಡ ಲಾಂಗು ಮಚ್ಚುಗಳನ್ನು ಹಿಡಿದು ಪುಂಡಾಟ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಇಲ್ಲಿನ ಸ್ಥಳೀಯರು ಆರೋಪಿಸಿದ್ದಾರೆ.

Advertisement

ಸೋಮವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಕಲ್ಲುತೂರಾಟ ನಡೆಸಿ ಗಂಭೀರ ಗಾಯಗೊಳಿಸಿದ ಹಿನ್ನೆಲೆಯಲ್ಲಿ ಪೊಲೀಸರಿಗೆ ನೀಡಿದ ಮಾಹಿತಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಬೆಳಕಿಗೆ ಬಂದಿದೆ.

ಸ್ಥಳೀಯರ ಹೇಳಿಕೆಯಂತೆ ಸೋಮವಾರ ರಾತ್ರಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳ ತಂಡ ಹಿಂದೂ ಕಾರ್ಯಕರ್ತ ದಿ. ಹರ್ಷನ ಮನೆಯ ಬಳಿ ನಿಂತು ಲಾಂಗು ಮಚ್ಚುಗಳನ್ನು ಹಿಡಿದು ಪುಂಡಾಟ ಮೆರೆದಿದ್ದಾರೆ ಅಲ್ಲದೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ ಎನ್ನಲಾಗಿದೆ, ಈ ವಿಚಾರ ಗೊತ್ತಾಗುತ್ತಿದ್ದಂತೆ ಸೇರಿದ ಸ್ಥಳೀಯರು ದುಷ್ಕರ್ಮಿಗಳನ್ನು ಹಿಂಬಾಲಿಸಲು ಮುಂದಾಗಿದ್ದಾರೆ ಈ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಓರ್ವ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಮೂರು ದಿನದ ಹಿಂದೆ ಹರ್ಷ ಸಹೋದರಿ ಅಶ್ವಿನಿ ವಿರುದ್ಧ ಅನ್ಯಕೋಮಿನ ವ್ಯಕ್ತಿಯ ಕಾರು ಜಖಂಗೊಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಇದಕ್ಕೆ ಪ್ರತಿಯಾಗಿ ದುಷ್ಕರ್ಮಿಗಳು ಗಲಾಟೆ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಘಟನೆ ಕುರಿತು ದೊಡ್ಡ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ : ತಿಂಗಳ ಅವಧಿಯಲ್ಲಿ ರಿಷಿ ಮೇಲಿದ್ದ ಅಭಿಪ್ರಾಯ ಬದಲು; ರಿಷಿ ಕೈಹಿಡಿದ ತೆರಿಗೆ, ವಿತ್ತ ನೀತಿ

Advertisement

Udayavani is now on Telegram. Click here to join our channel and stay updated with the latest news.

Next